Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:14
18 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು.


ಪ್ರಾಕೃತಮನುಷ್ಯನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತಾಗಿ ತೋರುತ್ತವೆ; ಅವು ಆತ್ಮವಿಚಾರದಿಂದ ತಿಳಿಯ ತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸಲಾರನು.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.


ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ;


ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವದು.


ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.


ನಿನ್ನ ಮನೆಯಲ್ಲಿ ಹುಟ್ಟಿದವರಿಗೂ ನೀನು ಕ್ರಯಕ್ಕೆ ತೆಗೆದುಕೊಂಡವರಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ನಿಬಂಧನೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವದು.


ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು