Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:6 - ಕನ್ನಡ ಸತ್ಯವೇದವು J.V. (BSI)

6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I ಆದಿಯಿಂದ ನೀ ತೋರಿದಚಲ ಪ್ರೀತಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ. ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ, ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:6
35 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವು ದೇವರಿಂದ ಆರಿಸಿಕೊಂಡವರೂ ಪ್ರತಿಷ್ಠಿತರೂ ಪ್ರಿಯರೂ ಆಗಿರುವದರಿಂದ ಕನಿಕರ ದಯೆ ದೀನಭಾವ ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ಯುಗಯುಗಾಂತರಗಳವರೆಗೂ ಇರುತ್ತದೆ.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ತಲತಲಾಂತರದವರೆಗೂ ಇರುವದು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ; ಆತನು ಕನಿಕರವುಳ್ಳ ತಂದೆಯೂ ಸಕಲವಿಧವಾಗಿ ಸಂತೈಸುವ ದೇವರೂ ಆಗಿದ್ದು


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.


ಆತನು ಇಸ್ರಾಯೇಲನ ಮನೆತನದವರ ಕಡೆಗಿದ್ದ ತನ್ನ ಪ್ರೀತಿಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ ನಮ್ಮ ದೇವರ ರಕ್ಷಾಕಾರ್ಯವನ್ನು ನೋಡಿದ್ದಾರೆ.


ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿ ಬಿದ್ದಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದುಂಟೇ?


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.


ಆತನು ನಮ್ಮ ಪೂರ್ವಿಕರಿಗೆ ಹೇಳಿದ್ದಕ್ಕೆ ಸರಿಯಾಗಿ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬದನ್ನು ನೆನಸಿಕೊಂಡು ತನ್ನ ಸೇವಕನಾದ ಇಸ್ರಾಯೇಲನನ್ನು ಕೈಹಿಡಿದಿದ್ದಾನೆ ಅಂದಳು.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ಯಾಹುವಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.


ನಿನ್ನ ಜೀವವನ್ನು ನಾಶದಿಂದ ತಪ್ಪಿಸುವವನೂ ಪ್ರೀತಿಕೃಪೆಗಳೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.


ಯೆಹೋವನೇ, ನನ್ನ ಮೊರೆಯನ್ನು ಲಾಲಿಸು; ನಿನ್ನ ಕೃಪೆಯು ಶುಭಕರವಾಗಿದೆಯಲ್ಲಾ. ಕರುಣಾನಿಧಿಯೇ, ನನ್ನನ್ನು ಕಟಾಕ್ಷಿಸು.


ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯಸಂಧನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.


ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.


ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘ ಸ್ತಂಭವೂ ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕು ಕೊಡುತ್ತಿದ್ದ ಅಗ್ನಿಸ್ತಂಭವೂ ಅವರನ್ನು ಬಿಟ್ಟುಹೋಗಲಿಲ್ಲ.


ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.


ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ನೀನು ಬಿಡುಗಡೆ ಮಾಡಿದ ಪ್ರಜೆಯನ್ನೋ ಪ್ರೀತಿಯಿಂದ ನಡಿಸಿಕೊಂಡು ನಿನ್ನ ಪರಿಶುದ್ಧ ನಿವಾಸಸ್ಥಾನದ ತನಕ ನಿನ್ನ ಶಕ್ತಿಯಿಂದ ಬರಮಾಡಿದಿ.


ಇದಲ್ಲದೆ ಅವನು ದೇವರನ್ನು ಪ್ರಾರ್ಥಿಸಿ - ಯೆಹೋವನೇ, ನನ್ನ ತಂದೆತಾತಂದಿರಾದ ಇಸಾಕ ಅಬ್ರಹಾಮರ ದೇವರೇ, ಸ್ವದೇಶಕ್ಕೆ ಬಂಧುಗಳ ಬಳಿಗೆ ತಿರಿಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೇದನ್ನು ಮಾಡುವೆನೆಂದು ನನಗೆ ವಾಗ್ದಾನ ಮಾಡಿದವನು ನೀನೇ ಅಲ್ಲವೇ.


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು.


ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳುಪ್ರದೇಶಗಳನ್ನೂ ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೆಂತಲ್ಲ, ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆಮಾಡುತ್ತಿದ್ದೇವೆ.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು