Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:1
30 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.


ಯೆಹೋವನು ಎಲ್ಲಾ ಜನಾಂಗಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.


ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು; ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.


ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನ ಕೃಪೆಯ ದೆಸೆಯಿಂದ ಅವನು ಕದಲುವದೇ ಇಲ್ಲ.


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಯೆಹೋವನು ನ್ಯಾಯಾಧಿಪತಿಯಾಗಿ ನವ್ಮಿುಬ್ಬರ ವ್ಯಾಜ್ಯವನ್ನು ತೀರಿಸಲಿ; ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಗೆ ತಪ್ಪಿಸಲಿ ಎಂದು ಹೇಳಿದನು.


ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಆತನು ನಿನ್ನ ಪಾದಗಳನ್ನು ಕದಲಗೊಡಿಸದಿರಲಿ; ನಿನ್ನನ್ನು ಕಾಯುವವನು ತೂಕಡಿಸದಿರಲಿ.


ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದಾಗಲೇ ನಿನ್ನ ಕೃಪೆಯು ನನಗೆ ಆಧಾರವಾಯಿತು.


ಆತನೇ ನನಗೆ ಶರಣನೂ ರಕ್ಷಕನೂ ದುರ್ಗವೂ; ನಾನು ಕದಲುವದಿಲ್ಲ.


ಆತನೇ ನನಗೆ ಶರಣನೂ ರಕ್ಷಕನೂ ದುರ್ಗವೂ; ನಾನು ಕದಲಿದರೂ ಬೀಳೆನು.


ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.


ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವದು; ಅವನು ಜಾರುವದೇ ಇಲ್ಲ.


ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.


ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.


ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.


ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಯಥಾರ್ಥತ್ವವೂ ನನ್ನನ್ನು ಕಾಯಲಿ.


ನನಗೆ ಆಶಾಭಂಗಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.


ಅವನು ಸಜ್ಜನನೂ ನೀತಿವಂತನೂ ಮನಃಪೂರ್ವಕವಾಗಿ ಸತ್ಯವಚನವನ್ನಾಡುವವನೂ ಆಗಿರಬೇಕು.


ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.


ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು