Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:11 - ಕನ್ನಡ ಸತ್ಯವೇದವು J.V. (BSI)

11 ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನಾದರೋ ನಿರಪರಾಧಿ. ನನಗೆ ಕರುಣೆತೋರಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:11
19 ತಿಳಿವುಗಳ ಹೋಲಿಕೆ  

ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರುನಿವಿುತ್ತವಾಗಿ ನನ್ನನ್ನು ರಕ್ಷಿಸು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು, ದೇವರೂ ಸಾಕ್ಷಿ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪುಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ ಸ್ವೀಕಾರ ಮಾಡುವನು. ಸೆಲಾ.


ಆದರೆ ಯಾವನಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದೆ ಶಾಶ್ವತವಾಗಿ ಬದುಕಿರುವದಕ್ಕಾಗಿ


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥಹೃದಯದಿಂದಲೇ ಪ್ರವರ್ತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು