Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:6 - ಕನ್ನಡ ಸತ್ಯವೇದವು J.V. (BSI)

6 ಹೀಗಿರುವದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ ನನ್ನ ತಲೆ ಎತ್ತಲ್ಪಟ್ಟಿರುವದು; ನಾನು ಯೆಹೋವನ ಗುಡಾರದಲ್ಲಿ ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:6
38 ತಿಳಿವುಗಳ ಹೋಲಿಕೆ  

ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ಕೃತಜ್ಞತಾಯಜ್ಞಗಳನ್ನು ಸಮರ್ಪಿಸಿ ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಶತ್ರುಗಳಿಂದ ನನ್ನನ್ನು ಬಿಡುಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಬನ್ನಿರಿ, ಯೆಹೋವನಿಗೆ ಉತ್ಸಾಹ ಧ್ವನಿಗೈಯುವಾ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.


ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು; ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ದೊಡ್ಡದುಮಾಡುವೆನು.


ಯೆಹೋವನು ಇಂತೆನ್ನುತ್ತಾನೆ - ಯಾಕೋಬಿನ ನಿವಿುತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ; ಯೆಹೋವನೇ, ಇಸ್ರಾಯೇಲಿನ ಶೇಷವಾದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.


ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.


[ಒಡೆಯನು] ದಾರಿಯಲ್ಲಿ ಹಳ್ಳದ ನೀರು ಕುಡಿದು ತಲೆಯೆತ್ತುವನು.


ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹ ಧ್ವನಿಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.


ಸರ್ವಜನಾಂಗಗಳಿರಾ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.


ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಪ್ರಸಿದ್ಧಿಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.


ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -


ಆ ಮೂರು ಕೊಂಬೆಗಳೇ ಮೂರು ದಿನಗಳು; ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ ನಿನ್ನ ಉದ್ಯೋಗಕ್ಕೆ ತಿರಿಗಿ ನೇವಿುಸುವನು. ನೀನು ಮುಂಚೆ ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.


ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯಭಕ್ಷ್ಯಕಾರನನ್ನೂ ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.


ನಾನು ಯೆಹೋವನಿಗೆ ಮೊರೆಯಿಡುವಾಗ ಆತನು ತನ್ನ ಪರಿಶುದ್ಧಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.


ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಮುಂಗೊಳ್ಳುವೆನು.


ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು; ನಿನ್ನ ವಿಧಿಗಳನ್ನು ನನಗೆ ಕಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು