Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 29:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಭು ಆಸೀನನು ಆಗಸದ ಜಲರಾಶಿಗಳ ಮೇಲೆ I ಪ್ರತಿಭಾಸ್ವರೂಪನಾದ ದೇವನಿದೋ, ಗುಡುಗುತ್ತಲೇ I ಆತನಾಡಂಬರ ಧ್ವನಿ ಮೇಘಮಂಡಲದ ಮೇಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 29:3
21 ತಿಳಿವುಗಳ ಹೋಲಿಕೆ  

ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸಿದಾಗ ಗುಡುಗೂ ಕಲ್ಲಿನ ಮಳೆಯೂ ನಿಂತು ಹೋದವು, ಮಳೆಯು ನಿಂತಿತು.


ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು.


ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಜಲಪ್ರವಾಹಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ಕೇಳಿದೆನು. ಅದು - ಹಲ್ಲೆಲೂಯಾ; ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ;


ಆಗ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವಾಯಿತು; ಮನುಷ್ಯರು ಭೂವಿುಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಲಿಲ್ಲ.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಸಿಂಹಾಸನದೊಳಗಿಂದ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಹೊರಡುತ್ತವೆ. ಅದರ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ಜಲರಾಶಿಗಳ ಮೇಲೆ ಉಪ್ಪರಿಗೆಗಳನ್ನು ಕಟ್ಟಿಕೊಂಡಿದ್ದೀ; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿದ್ದೀ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಸಮುವೇಲನು ಯಜ್ಞವನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕೋಸ್ಕರ ಸಮೀಪಿಸಲಾಗಿ ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲ್ಯರಿಗೆ ಸೋತು ಓಡಿಹೋಗುವಂತೆ ಮಾಡಿದನು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿದ್ದ ಕೆಂಡಗಳಿಂದ ತುಂಬಿಸಿ ಭೂವಿುಗೆ ಬಿಸಾಡಿದನು. ಆಗ ಗುಡುಗುಗಳೂ ವಾಣಿಗಳೂ ವಿುಂಚುಗಳೂ ಭೂಕಂಪವೂ ಉಂಟಾದವು.


ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ - ಗುಡುಗಿತು ಅಂದರು. ಇನ್ನು ಕೆಲವರು - ದೇವದೂತನು ಈತನ ಸಂಗಡ ಮಾತಾಡಿದನು ಅಂದರು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು


ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವದು, ದನಗಳು ಸಹ ಆತನ ಆಗಮನವನ್ನು ತಿಳಿಸುವವು.


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು