Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವದಕ್ಕೆ ಅವಕಾಶಕೊಡದೆ ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿನಗೆನ್ನ ವಂದನೆ ಪ್ರಭು, ನನ್ನನುದ್ಧರಿಸಿದೆ I ಶತ್ರುಗಳೆನ್ನ ಕುರಿತು ಹಿಗ್ಗದಂತೆ ಮಾಡಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ; ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ; ಆದ್ದರಿಂದ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು; ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ. ನನ್ನನ್ನು ಮೇಲಕ್ಕೆ ಎತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:1
24 ತಿಳಿವುಗಳ ಹೋಲಿಕೆ  

ನನಗೆ ಆಶಾಭಂಗಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.


ನಿರ್ನಿವಿುತ್ತ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಅವಕಾಶಕೊಡಬೇಡ; ನಿಷ್ಕಾರಣವೈರಿಗಳ ಕಣ್ಣುಸನ್ನೆಗೆ ಆಸ್ಪದ ಕೊಡಬೇಡ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದ ಹಾಗೆ ಅವರ ಆಶೆಗಳನ್ನು ನೆರವೇರಿಸಬೇಡ; ಅವರ ಕುಯುಕ್ತಿಯನ್ನು ಸಾಗಗೊಡಬೇಡ ಎಂದು ಹೇಳುತ್ತೇನೆ. ಸೆಲಾ.


ನನ್ನ ಶತ್ರುವು - ಅವನನ್ನು ಜಯಿಸಿದೆನೆಂದು ಹೇಳಿಕೊಳ್ಳಬಾರದು; ವೈರಿಗಳು ಜಾರಿಬಿದ್ದನೆಂದು ಹಿಗ್ಗಬಾರದು.


ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು.


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ. ಯೆರೂಸಲೇಮ್ ನಗರಿಯನ್ನು ಕಂಡು - ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನಿಸಿಕೊಳ್ಳುತ್ತಿದ್ದ ಪುರಿಯು ಇದೇಯೋ? ಛೀ ಛೀ ಎಂದು ತಲೆಯಾಡಿಸುತ್ತಾರೆ.


ನನ್ನ ದೇವರೇ, ಒಡೆಯನೇ, ನಿನ್ನನ್ನು ಘನಪಡಿಸುವೆನು; ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.


ಮ್ಲೇಚ್ಫರು - ಅವರ ದೇವರು ಎಲ್ಲಿ ಎಂದು ಅನ್ನುವದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು ಜನಾಂಗಗಳಿಗೆ ಗೊತ್ತಾಗಲಿ.


ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.


[ಯೆಹೋವನೇ,] ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.


ಹೀಗಿರುವದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ ನನ್ನ ತಲೆ ಎತ್ತಲ್ಪಟ್ಟಿರುವದು; ನಾನು ಯೆಹೋವನ ಗುಡಾರದಲ್ಲಿ ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.


ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದದರಿಂದ ಅವನು ಇವರೊಡನೆ ಲೇವಿ ಬೆನ್ಯಾಮೀನ್ ಕುಲಗಳವರ ಖಾನೇಷುಮಾರಿಯನ್ನು ಮಾಡಲಿಲ್ಲ.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.


ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ದೇವರ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು - ಈ ಹೊತ್ತು ಇಸ್ರಾಯೇಲ್ಯರ ಅರಸನು ಎಂಥ ಗೌರವದಿಂದ ನಡೆದುಕೊಂಡನು! ನೀಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ ಅಂದಳು. ಆಗ ದಾವೀದನು ಆಕೆಗೆ -


ಮತ್ತು ಸೈನ್ಯಾಧಿಪತಿಗಳು ಅವರಿಗೆ - ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನೂ ಗೃಹಪ್ರವೇಶ ಮಾಡದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶಮಾಡಿಕೊಂಡಾನು.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣವರ ಪರಿಹಾಸ್ಯ ಕುಚೋದ್ಯಗಳಿಗೆ ಗುರಿಯಾದೆವು.


ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.


ಅರಸನಾದ ದಾವೀದನು ಯೆರೂಸಲೇವಿುಗೆ ಬಂದ ಮೇಲೆ ತಾನು ಮನೆಕಾಯುವದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರಕೊಡುತ್ತಿದ್ದನು; ಆದರೆ ಅವರನ್ನು ತಿರಿಗಿ ಕೂಡಲಿಲ್ಲ. ಅವರು ಜೀವದಿಂದಿರುವವರೆಗೂ ವಿಧವೆಯರಂತಿದ್ದು ಕಾವಲಲ್ಲಿರಬೇಕಾಯಿತು.


ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಆಲಯವನ್ನು ಪ್ರತಿಷ್ಠಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು