Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:12 - ಕನ್ನಡ ಸತ್ಯವೇದವು J.V. (BSI)

12 ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು. ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:12
16 ತಿಳಿವುಗಳ ಹೋಲಿಕೆ  

ದಿನಂಪ್ರತಿ ನಿನ್ನನ್ನು ಕೀರ್ತಿಸುವೆನು; ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.


ದೇವರೇ ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು. ಸೆಲಾ.


ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು.


ಆತನು - ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು ಎಂದು ನಿಮಗೆ ಹೇಳುತ್ತೇನೆ ಅಂದನು.


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು ಎಂದು ಉತ್ತರ ಕೊಟ್ಟರು.


ನನ್ನ ತುಟಿಗಳೂ ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.


ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.


ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಮುಂಗೊಳ್ಳುವೆನು.


ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.


ಆಮೆನ್. ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಶಕ್ತಿಯೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.


ನನ್ನ ಪ್ರಾಣವೇ, ಅವರ ಗುಪ್ತವಾದ ದುರಾಲೋಚನೆಗೆ ನೀನು ಒಳಪಡಬಾರದು; ನನ್ನ ಮನವೇ, ಅವರ ಗುಂಪಿಗೆ ನೀನು ಸೇರಬೇಡ. ಅವರು ಕೋಪೋದ್ರೇಕದಿಂದ ಮನುಷ್ಯರನ್ನು ಸಂಹರಿಸಿದರು; ಮದದಿಂದ ಎತ್ತುಗಳನ್ನು ಊನಪಡಿಸಿದರು.


ಅಲ್ಲಿನ ಯೆಹೂದ್ಯರು ಸಂತೋಷ ಹರ್ಷ ಪ್ರಭಾವ ತೇಜಸ್ಸುಗಳುಳ್ಳವರಾದರು.


ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿಯುಂಟಾಯಿತು; ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂತು. ಆದದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸಿ ಬಡವರಿಗೆ ದಾನಧರ್ಮಮಾಡಬೇಕು.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು