Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:11 - ಕನ್ನಡ ಸತ್ಯವೇದವು J.V. (BSI)

11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:11
24 ತಿಳಿವುಗಳ ಹೋಲಿಕೆ  

ನನ್ನ ಕಣ್ಣುಗಳೂ ಮೊಬ್ಬಾಗಿಹೋದವು. ನನ್ನ ಆಪ್ತಸ್ನೇಹಿತರು ನನ್ನ ಜಾಡ್ಯವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.


ನನ್ನ ಆಪ್ತರು ನನ್ನನ್ನು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಕಟ್ಟಲ್ಪಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆ.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ನನ್ನ ಆಪ್ತವಿುತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಪರಿಚಯವು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಎಡವಿ ಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.


ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಆದದರಿಂದ ನಾವು ಆತನ ನಿವಿುತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೋಣ.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಕಡೆ ಆಗಲಿಲ್ಲ; ಎಲ್ಲರೂ ನನ್ನನ್ನು ಕೈಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ.


ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ.


ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಆ ಮನುಷ್ಯನನ್ನು ನಾನರಿಯೆನು ಎಂದು ಹೇಳಿ ಶಾಪಹಾಕಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು.


ಮಗನು ತಂದೆಯನ್ನು ತುಚ್ಫೀಕರಿಸುತ್ತಾನೆ, ಮಗಳು ತಾಯಿಗೆ ಎದುರೇಳುತ್ತಾಳೆ; ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ; ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗಿದ್ದಾರೆ.


ನಿನ್ನ ಸಹೋದರರೂ ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹ ಮಾಡಿರುತ್ತಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗಿರುತ್ತಾರೆ; ಒಳ್ಳೇ ಮಾತಾಡಿದರೂ ಇವರನ್ನು ನಂಬಬೇಡ.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು