Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:15 - ಕನ್ನಡ ಸತ್ಯವೇದವು J.V. (BSI)

15 ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಗೆ ನನ್ನನ್ನು ತಪ್ಪಿಸಿಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಜೀವವು ನಿನ್ನ ಕೈಯಲ್ಲಿದೆ. ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:15
31 ತಿಳಿವುಗಳ ಹೋಲಿಕೆ  

ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.


ಯೇಸು ಈ ಮಾತುಗಳನ್ನಾಡಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ಹೇಳಿದ್ದೇನಂದರೆ - ತಂದೆಯೇ, ಕಾಲ ಬಂದದೆ; ನಿನ್ನ ಮಗನನ್ನು ಮಹಿಮೆಪಡಿಸು, ಆಗ ಮಗನು ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.


ಯೇಸು ಅವರಿಗೆ - ನನ್ನ ಸಮಯವು ಇನ್ನೂ ಬಂದಿಲ್ಲ; ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.


ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.


ಸರ್ವಶಕ್ತನು ಏಕೆ [ದಂಡನೆಯ] ಕಾಲಗಳನ್ನು ನೇವಿುಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ [ನ್ಯಾಯ ತೀರ್ಪಿನ] ದಿನಗಳು ಏಕೆ ಗೋಚರವಾಗುವದಿಲ್ಲ?


ಯಾಕಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸಮೀಪಕ್ಕೆ ಬಂದದೆ.


ಯೆಹೋವನೇ, ನಿನ್ನನ್ನೇ ಮರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು.


ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಇದಲ್ಲದೆ ದಾವೀದನು - ಯೆಹೋವನಾಣೆ, ಅವನು ಯೆಹೋವನಿಂದ ಸಾಯುವನು; ಇಲ್ಲವೆ ಕಾಲತುಂಬಿ ಮೃತಿಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ಯಾಕಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ಈ ಗುಡಾರವನ್ನು ಕಿತ್ತುಹಾಕುವ ಕಾಲ ಬೇಗನೇ ಬರುತ್ತದೆಂದು ಬಲ್ಲೆನು.


ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಈಗ ನನ್ನ ಪ್ರಾಣವು ತತ್ತರಿಸುತ್ತದೆ; ಮತ್ತು ನಾನೇನು ಹೇಳಲಿ? ತಂದೆಯೇ, ಈ ಕಾಲದೊಳಗಿಂದ ನನ್ನನ್ನು ತಪ್ಪಿಸು. ಆದರೆ ಇದಕ್ಕಾಗಿಯೇ ಈ ಕಾಲ ಸೇರಿದೆನು.


ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.


ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು


ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವದಿಲ್ಲ.


ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.


ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.


ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣಮಾಡದೆ ಇರುವರು.


ಆಸನು ಅವನೆದುರಿಗೆ ಹೋದನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬೈಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ನನಗೆ ಆಶಾಭಂಗಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.


ನಾನು ಯೆಹೋವನಿಗೆ - ನೀನೇ ನನ್ನ ಶರಣನು ನನ್ನ ದುರ್ಗವು ನಾನು ಭರವಸವಿಟ್ಟಿರುವ ನನ್ನ ದೇವರು ಎಂದು ಹೇಳುವೆನು.


ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ;


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು