Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:17 - ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ಮೊರೆಯಿಟ್ಟಿದ್ದೇನೆ; ನನಗೆ ಆಶಾಭಂಗಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. ಆದ್ದರಿಂದ ನಾನು ನಿರಾಶನಾಗುವುದಿಲ್ಲ. ಕೆಡುಕರಾದರೋ ನಿರಾಶರಾಗುವರು. ಅವರು ಮೌನವಾಗಿ ಸಮಾಧಿಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ನಾನು ನಾಚಿಕೆಪಡದಂತೆ ಮಾಡಿರಿ; ನಾನು ನಿಮಗೆ ಮೊರೆಯಿಟ್ಟಿದ್ದೇನೆ; ದುಷ್ಟರು ನಾಚಿಕೆಪಡಲಿ; ಅವರು ಸಮಾಧಿ ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:17
25 ತಿಳಿವುಗಳ ಹೋಲಿಕೆ  

ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.


ಸತ್ತವರು ಯಾಹುವನ್ನು ಸ್ತುತಿಸುವದಿಲ್ಲ; ಮೌನಲೋಕವನ್ನು ಸೇರಿದವರಲ್ಲಿ ಯಾರೂ ಆತನನ್ನು ಕೀರ್ತಿಸುವದಿಲ್ಲ.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು ಮಾನಭಂಗವನ್ನೂ ದುಷ್ಕೀರ್ತಿಯನ್ನೂ ಹೊದ್ದುಕೊಳ್ಳಲಿ.


ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ.


ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.


ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವದು.


ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಯೋಚಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಯೆಹೋವನೇ, ನಿನ್ನ ಮರೆಹೊಕ್ಕಿದ್ದೇನೆ; ನನಗೆ ಎಂದಿಗೂ ಆಶಾಭಂಗಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.


ನನ್ನ ವಿರೋಧಿಗಳೆಲ್ಲರು ಆಶೆಗೆಟ್ಟು ಕಳವಳಗೊಳ್ಳುವರು; ಅವರು ಫಕ್ಕನೆ ಆಶಾಭಂಗಪಟ್ಟು ಹಿಂದಿರುಗುವರು.


ಧಾನ್ಯದ್ರಾಕ್ಷೆಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಅವರಿಗಿರುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.


ಸೇನಾಧೀಶ್ವರನಾದ ಯೆಹೋವದೇವರೇ, ನಿನಗೆ ಮೊರೆಯಿಡುವ ನಿನ್ನ ಪ್ರಜೆಗೆ ಇನ್ನೆಷ್ಟರವರೆಗೆ ಮುನಿದಿರುವಿ?


ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು