Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:7 - ಕನ್ನಡ ಸತ್ಯವೇದವು J.V. (BSI)

7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವದನ್ನು ನೋಡಿ ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:7
23 ತಿಳಿವುಗಳ ಹೋಲಿಕೆ  

ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು; ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಈಗಲಾದರೋ ನೀವು ದೇವರನ್ನು ತಿಳುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ. ಹೀಗಿರಲಾಗಿ ನೀವು ಕೆಲಸಕ್ಕೆ ಬಾರದ ದರಿದ್ರಬಾಲಬೋಧೆಗೆ ಮತ್ತೂ ಅಧೀನರಾಗಬೇಕೆಂದು ಅಪೇಕ್ಷಿಸಿ ಪುನಃ ಅದಕ್ಕೆ ತಿರುಗಿಕೊಳ್ಳುವದು ಹೇಗೆ?


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ನನ್ನ ನೇತ್ರವು ನಿರಂತರವಾಗಿ ಅಶ್ರುಧಾರೆಯನ್ನು ಸುರಿಸುವದು, ಎಂದಿಗೂ ಬಿಡದು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ನನ್ನ ಆತ್ಮವು ಕುಂದಿಹೋಗಿದೆ; ನೀನೇ ನನ್ನ ಮಾರ್ಗವನ್ನು ಬಲ್ಲವನು; ನಾನು ಹೋಗಬೇಕಾದ ದಾರಿಯಲ್ಲಿ ಉರುಲನ್ನೊಡ್ಡಿದ್ದಾರೆ.


ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂವಿುಯ ಅಧೋಭಾಗದಿಂದ ಮೇಲೆತ್ತು.


ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವದು.


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ಉದಯದಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.


ನಾನು ಕುಗ್ಗಿರುವದನ್ನೂ ಕಷ್ಟಪಡುವದನ್ನೂ ನೋಡಿ ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನೀನು ನನ್ನನ್ನು ಜೇಡಿಮಣ್ಣಿನಿಂದಲೋ ಎಂಬಂತೆ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರಿಗಿ ಮಣ್ಣಾಗುವಂತೆ ಮಾಡುವಿಯಾ?


ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳುಕೊಳ್ಳುತ್ತಾನೆ.


ಯೆಹೋವನೇ, ನಮಗಾದ ದುರ್ಗತಿಯನ್ನು ಚಿತ್ತಕ್ಕೆ ತಂದುಕೋ; ನಾವು ಗುರಿಯಾಗಿರುವ ದೂಷಣೆಯನ್ನು ದೃಷ್ಟಿಸಿ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು