Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:8 - ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:8
17 ತಿಳಿವುಗಳ ಹೋಲಿಕೆ  

ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ; ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಯಾಜಕರನ್ನು ಮೃಷ್ಟಭೋಜನದಿಂದ ತಂಪುಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.


ಮೃಷ್ಟಭೋಜನದಿಂದಲೋ ಎಂಬಂತೆ ನನ್ನ ಮನಸ್ಸು ಸಂತುಷ್ಟವಾಗಿರುವದು; ನನ್ನ ಬಾಯಿ ಉತ್ಸಾಹಧ್ವನಿಮಾಡುತ್ತಾ ನಿನ್ನನ್ನು ಕೊಂಡಾಡುವದು.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.


ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು.


ದುಷ್ಟಾಧಿಕಾರಿಯೇ, ನೀನು ಕೆಡುಕು ಮಾಡಿ ಹಿಗ್ಗುವದೇನು? ದೇವರ ಕೃಪೆಯು ಯಾವಾಗಲೂ ಇರುವದು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು