Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:4 - ಕನ್ನಡ ಸತ್ಯವೇದವು J.V. (BSI)

4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಯೋಚಿಸುವವರು ಮಾನಭಂಗದಿಂದ ಹಿಂದಿರುಗಿ ಓಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನ್ನ ಕೊಲೆಗೆ ಯತ್ನಿಸುವವನು ತಲೆ ತಗ್ಗಿಸಲಿ ನಿರಾಶೆಗೊಂಡು I ನನಗೆ ಕೇಡನು ಮಾಡುವವರು ಓಡಿಹೋಗಲಿ ಗಲಿಬಿಲಿಗೊಂಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:4
15 ತಿಳಿವುಗಳ ಹೋಲಿಕೆ  

ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನು ಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತುಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ನನ್ನ ಪ್ರಾಣವನ್ನು ತೆಗೆಯಬೇಕೆಂಬವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು ಮಾನಭಂಗವನ್ನೂ ದುಷ್ಕೀರ್ತಿಯನ್ನೂ ಹೊದ್ದುಕೊಳ್ಳಲಿ.


ಚೀಯೋನನ್ನು ದ್ವೇಷಿಸುವವರೆಲ್ಲರು ಅವಮಾನದಿಂದ ಹಿಂದಿರುಗಲಿ.


ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವದು.


ಆದದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ನಿಜವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು; ಅವನು ದೇಶದಲ್ಲಿರುವದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾದರೂ ಹುಡುಕಿ ಅವನನ್ನು ಹಿಡಿಯುವೆನು ಅಂದನು.


ಆತನು ಅವರಿಗೆ - ನಾನೇ ಅವನು ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲದ ಮೇಲೆ ಬಿದ್ದರು.


ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ.


ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.


ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಬೆಳಗಾಗಲು ಎಲ್ಲಾ ಮಹಾಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಆಲೋಚನೆ ಮಾಡಿಕೊಂಡು


ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು