Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:1 - ಕನ್ನಡ ಸತ್ಯವೇದವು J.V. (BSI)

1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಇಕ್ಕಟ್ಟಿನಿಂದ ಬಿಡಿಸಿ ಇಂಬಾದ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಅಂಗೀಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:1
35 ತಿಳಿವುಗಳ ಹೋಲಿಕೆ  

ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು.


ಅಭಿಮುಖನಾಗಿ ಕರುಣಿಸು; ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವದು ನಿನಗೆ ವಿಧಿಯಷ್ಟೆ.


ನಾನು ಒಬ್ಬೊಂಟಿಗನೂ ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.


ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.


ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕುಮಾಡಿ ನನ್ನ ಉನ್ನತಪ್ರದೇಶಗಳಲ್ಲಿ ನನ್ನನ್ನು ನಡಿಸುತ್ತಾನೆ. ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಯೆಹೋವನಲ್ಲಿ ಮಾತ್ರ ಸತ್ಯಕಾರ್ಯಗಳೂ ಶಕ್ತಿಯೂ ಉಂಟು; ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಮರೆಹೊಗುವರು;


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ.


ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯಮಾಡದೆಯೂ ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?


ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಗೂ ತಪ್ಪಿಸುವನು ಎನ್ನಲು ಸೌಲನು ದಾವೀದನಿಗೆ - ಹೋಗು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿ


ಸಹೋದರರೇ, ಆಸ್ಯ ಸೀಮೆಯಲ್ಲಿ ನಮಗೆ ಸಂಭವಿಸಿದ ಸಂಕಟವನ್ನು ಕುರಿತು ವಿಚಾರಿಸುತ್ತೀರೋ ಅದರಲ್ಲಿ ನಾವು ಬಲವನ್ನು ಮೀರಿದಂಥ ಅತ್ಯಧಿಕವಾದ ಭಾರದಿಂದ ಕುಗ್ಗಿಹೋಗಿ ಜೀವವುಳಿಯುವ ಮಾರ್ಗವನ್ನು ಕಾಣದವರಾದೆವೆಂಬದನ್ನು ನೀವು ತಿಳಿಯಬೇಕೆಂದು ಅಪೇಕ್ಷಿಸುತ್ತೇನೆ.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ದೇವರು ಯೆಹೂದದೇಶದಲ್ಲಿ ಖ್ಯಾತಿಗೊಂಡವನು; ಇಸ್ರಾಯೇಲ್ಯರಲ್ಲಿ ಆತನ ನಾಮವು ದೊಡ್ಡದು.


ದೇವರೇ, ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸು; ಪ್ರಸನ್ನ ಮುಖದಿಂದ ನಮ್ಮನ್ನು ನೋಡು. ಸೆಲಾ.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ.


ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.


ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.


ಯಾಕಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯದಲ್ಲಿ ಇರುವರು.


ಯೆಹೋವನೇ, ಕರುಣಿಸು, ನಾನು ನಿನ್ನ ಕಿಂಕರನು; ನಿನ್ನ ದಾಸಿಯ ಮಗನೂ ನಿನ್ನ ಸೇವಕನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದೀ.


ಯೆಹೋವನು ಸಾಧುಜನರನ್ನು ಕಾಪಾಡುವವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.


ದೇವರೇ, ಕರುಣಿಸು; ನರರು ನನ್ನನ್ನು ನುಂಗಿಬಿಡಬೇಕೆಂದು ಎದ್ದಿದ್ದಾರೆ. ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.


ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ದಂಡಿಸಬೇಡ.


ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ ಇಕ್ಕಟ್ಟಿಲ್ಲದ ವಿಶಾಲಸ್ಥಳಕ್ಕೆ ಬರಮಾಡಬೇಕೆಂಬದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬದೂ ಆತನ ಉದ್ದೇಶವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು