Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:2 - ಕನ್ನಡ ಸತ್ಯವೇದವು J.V. (BSI)

2 ಮಹನೀಯರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸಿ ನನ್ನನ್ನು ಅವಮಾನ ಪಡಿಸುವಿರಿ? ಯಾಕೆ ನಿರರ್ಥಕವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು ಹುಡುಕುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:2
29 ತಿಳಿವುಗಳ ಹೋಲಿಕೆ  

ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಅವರು ಹೆಚ್ಚಿದ ಹಾಗೆಲ್ಲಾ ನನಗೆ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನಕ್ಕೆ ಮಾರ್ಪಡಿಸುವೆನು.


ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.


ಹೀಗೆ ಅವರು ತಮ್ಮ ದಿವ್ಯಮಹಿಮೆಯನ್ನು ಬಿಟ್ಟು ಹುಲ್ಲುತಿನ್ನುವ ಎತ್ತಿನ ಜಡಮೂರ್ತಿಯನ್ನು ಹಿಡಿದುಕೊಂಡರು.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯಮಾಡುವವರೂ, ಕಪಟಿಗಳೂ ನಿನಗೆ ಹೇಯವಾಗಿದ್ದಾರೆ.


ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೆ ನಡೆಯದಿರುವ ಕಾರಣ ಅಪರಾಧಮಾಡಬೇಕೆಂಬ ಯೋಚನೆಯು ನರಜನ್ಮದವರ ಹೃದಯದಲ್ಲಿ ತುಂಬಿ ತುಳುಕುವದು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.


[ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ಆಗ [ನನ್ನ ಜನರು] ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿವಿುತ್ತವಾಗಿಯೂ ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.


ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.


ದುಷ್ಟರು ಜನ್ಮದಿಂದಲೇ ಧರ್ಮ ಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ಬಿಟ್ಟವರು.


ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ಯಥಾರ್ಥವಾಗಿ ಬಗೆಹರಿಸುವದುಂಟೋ?


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ಸುಳ್ಳುವಿಗ್ರಹಗಳನ್ನು ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.


ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.


ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ?


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ಅವನು ನಿನ್ನ ಜನರಿಗೆ ನೀತಿಯಿಂದಲೂ ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.


ಯೆಹೋವನು ಮೋಶೆಗೆ - ಈ ಜನರು ಇನ್ನು ಎಷ್ಟರ ಮಟ್ಟಿಗೆ ನನ್ನನ್ನು ಅಲಕ್ಷ್ಯಮಾಡುವರೋ; ನಾನು ನಡಿಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರೋ.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂಬ ವೇದೋಕ್ತಿ ನೆರವೇರುವದಕ್ಕೆ ಇದರಿಂದ ಮಾರ್ಗವಾಯಿತು.


ಯೆಹೋವನು ಹೀಗನ್ನುತ್ತಾನೆ, ನಿಮ್ಮ ಪಿತೃಗಳು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡದರಿಂದ ವ್ಯರ್ಥಾಚಾರವನ್ನು ಅನುಸರಿಸಿ ತಾವೇ ವ್ಯರ್ಥರಾಗಿ ನನ್ನನ್ನು ಬಿಟ್ಟು ದೂರವಾದರು?


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಆಗ ಯೆಹೂದ್ಯರು ಈ ಸಂಗತಿಗಳು ನಿಜವೇ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವದರಲ್ಲಿ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು