Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:5 - ಕನ್ನಡ ಸತ್ಯವೇದವು J.V. (BSI)

5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅರ್ಪಿಸಿರಿ ಯೋಗ್ಯ ಬಲಿಗಳನೆ I ಇಡಿರಿ ಭರವಸೆ ಪ್ರಭುವಿನಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; ಯೆಹೋವನಲ್ಲಿಯೇ ಭರವಸೆಯಿಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:5
19 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಜನರು ನ್ಯಾಯವಾದ ಯಜ್ಞಗಳನ್ನೂ ಸರ್ವಾಂಗ ಹೋಮಗಳನ್ನೂ ಸಮರ್ಪಿಸಿ ನಿನಗೆ ಸಂತೋಷವನ್ನುಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಉಸುಬಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು.


ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವದೆ ಎಂಬದು ನಿನ್ನ ನೆನಪಿಗೆ ಬಂದರೆ,


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ ರೋಗದ ಪಶುವನ್ನೂ ಅರ್ಪಿಸುವದು ದೋಷವಲ್ಲವೆಂದು ನಂಬುತ್ತೀರೋ? ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಂಥದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು;


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ಮಾಡಿದ ಹರಕೆಗಳನ್ನು ಪರಾತ್ಪರನಿಗೆ ಸಲ್ಲಿಸಿರಿ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ಇದಲ್ಲದೆ ಅವನು ಸಮಾಧಾನಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಕರೇಕಳುಹಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದರಿಂದ ಒಳಸಂಚು ಬಲವಾಗುತ್ತಾ ಹೋಯಿತು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವದಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು