Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:7 - ಕನ್ನಡ ಸತ್ಯವೇದವು J.V. (BSI)

7 ಧಾನ್ಯದ್ರಾಕ್ಷೆಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಅವರಿಗಿರುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು I ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:7
14 ತಿಳಿವುಗಳ ಹೋಲಿಕೆ  

ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ, ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ; ಸುಗ್ಗಿಕಾಲದಲ್ಲಿ ಜನರು ಹರ್ಷಿಸುವ ಹಾಗೂ ಕೊಳ್ಳೆಯನ್ನು ಹಂಚಿಕೊಳ್ಳುವವರು ಹೆಚ್ಚಳಪಡುವ ಹಾಗೂ ನಿನ್ನ ಮುಂದೆ ಆನಂದಿಸುತ್ತಾರೆ.


ಆಗ ಯೆಹೋವನಲ್ಲಿ ಸಂತೋಷಿಸುವಿ; ಮತ್ತು ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.


ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದೀ; ನಿನ್ನ ಕೆಲಸಗಳ ದೆಸೆಯಿಂದ ಉತ್ಸಾಹಧ್ವನಿ ಮಾಡುತ್ತೇನೆ.


ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.


ಆ ಊರಿನವರು ಒಂದಾನೊಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು ಆಲೆಗಳಲ್ಲಿ ರಸತೆಗೆದು ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;


ಯೆಹೋವನೇ, ಮೊರೆಯಿಟ್ಟಿದ್ದೇನೆ; ನನಗೆ ಆಶಾಭಂಗಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


ಸೇನಾಧೀಶ್ವರನಾದ ಯೆಹೋವದೇವರೇ, ನಿನಗೆ ಮೊರೆಯಿಡುವ ನಿನ್ನ ಪ್ರಜೆಗೆ ಇನ್ನೆಷ್ಟರವರೆಗೆ ಮುನಿದಿರುವಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು