Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:6 - ಕನ್ನಡ ಸತ್ಯವೇದವು J.V. (BSI)

6 ಯಜ್ಞನೈವೇದ್ಯಗಳು ನಿನಗೆ ಇಷ್ಟವಲ್ಲ; ಸರ್ವಾಂಗಹೋಮಗಳನ್ನಾಗಲಿ ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:6
19 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು.


ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.


ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸೇನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ಕರುಣೆಯೇಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪು ಮಾಡುತ್ತಿದ್ದಿಲ್ಲ.


ನೀವು ನನಗೆ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸೆನು; ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನೋಡೆನು.


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಅವರ ಕಿವಿಗಳನ್ನು ತೆರೆದು ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆಹಾಕುವನು.


ನಾನು ನಿಮ್ಮ ಯಜ್ಞಗಳ ವಿಷಯದಲ್ಲಿ ತಪ್ಪೆಣಿಸುವದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.


ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರಕೊಂಡು ಬಂದು ಕದದ ಹತ್ತಿರ ಅಥವಾ ಬಾಗಲಿನ ನಿಲುವುಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ಸಲಾಕೆಯಿಂದ ಚುಚ್ಚಬೇಕು. ಆ ಹೊತ್ತಿನಿಂದ ಇವನು ಶಾಶ್ವತವಾಗಿ ಅವನಿಗೆ ದಾಸನಾಗಿರಬೇಕು.


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;


ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.


ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ; ಅವುಗಳ ಒಟ್ಟು ಅಸಂಖ್ಯವಾಗಿದೆ.


ಅವುಗಳನ್ನು ಲೆಕ್ಕಿಸುವದಾದರೆ [ಸಮುದ್ರದ] ಮರಳಿಗಿಂತ ಹೆಚ್ಚಾಗಿವೆ. ನಾನು ಎಚ್ಚರವಾಗಲು ಮುಂಚಿನಂತೆಯೇ ನಿನ್ನ ಬಳಿಯಲ್ಲಿದ್ದೇನೆ.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯಪ್ರಾಮಾಣಿಕತೆಗಳನ್ನು ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಗೊಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು