Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:11 - ಕನ್ನಡ ಸತ್ಯವೇದವು J.V. (BSI)

11 ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:11
9 ತಿಳಿವುಗಳ ಹೋಲಿಕೆ  

ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಆತನು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.


ಮ್ಲೇಚ್ಫರು - ಅವರ ದೇವರು ಎಲ್ಲಿ ಎಂದು ಅನ್ನುವದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು ಜನಾಂಗಗಳಿಗೆ ಗೊತ್ತಾಗಲಿ.


ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ವಿುಶ್ರವಾಯಿತು.


ಅವರ ದೇವರು ಎಲ್ಲಿದ್ದಾನೆಂದು ಅನ್ಯರು ಯಾಕೆ ಹೇಳಬೇಕು?


ಯೆಹೋವನ ಸೇವಕರಾದ ಯಾಜಕರು ದ್ವಾರಮಂಟಪಕ್ಕೂ ಯಜ್ಞವೇದಿಗೂ ನಡುವೆ ಅಳುತ್ತಾ - ಯೆಹೋವನೇ, ನಿನ್ನ ಜನರನ್ನು ಕರುಣಿಸು; ಅನ್ಯಜನಾಂಗಗಳು ಅವರ ಹೆಸರನ್ನು ಕಟ್ಟುಗಾದೆಯಾಗಿ ಎತ್ತುವ ನಿಂದೆಗೆ ನಿನ್ನ ಸ್ವಾಸ್ತ್ಯದವರನ್ನು ಗುರಿಮಾಡಬೇಡ; ಅವರ ದೇವರು ಎಲ್ಲಿ ಎಂಬ ಮಾತು ಮ್ಲೇಚ್ಫರಲ್ಲಿ ಏಕೆ ಸಲ್ಲಬೇಕು ಎಂದು ವಿಜ್ಞಾಪಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು