Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 43:1 - ಕನ್ನಡ ಸತ್ಯವೇದವು J.V. (BSI)

1 ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 43:1
21 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ವ್ಯಾಜ್ಯವಾಡು; ನನ್ನ ಮೇಲೆ ಯುದ್ಧಮಾಡುವವರ ಸಂಗಡ ಯುದ್ಧಮಾಡು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ಯೆಹೋವನು ಎಲ್ಲಾ ಜನಾಂಗಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.


ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.


ಯೆಹೋವನು ನ್ಯಾಯಾಧಿಪತಿಯಾಗಿ ನವ್ಮಿುಬ್ಬರ ವ್ಯಾಜ್ಯವನ್ನು ತೀರಿಸಲಿ; ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಗೆ ತಪ್ಪಿಸಲಿ ಎಂದು ಹೇಳಿದನು.


ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ ಅನ್ಯಾಯ ಬಲಾತ್ಕಾರಿಯ ವಶದಿಂದಲೂ ತಪ್ಪಿಸು.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯಮಾಡುವವರೂ, ಕಪಟಿಗಳೂ ನಿನಗೆ ಹೇಯವಾಗಿದ್ದಾರೆ.


ನಾನು ಯೆಹೋವನಿಗೆ ಪಾಪಮಾಡಿದ್ದರಿಂದ ಆತನ ರೋಷವನ್ನು ತಾಳಿಕೊಂಡಿರುವೆನು; ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ ನನಗೆ ನ್ಯಾಯವನ್ನು ತೀರಿಸುವನು; ನನ್ನನ್ನು ಬೆಳಕಿಗೆ ತರುವನು, ಆತನ ರಕ್ಷಣಧರ್ಮವನ್ನು ನೋಡುವೆನು.


ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ನನ್ನಲ್ಲಿ ದೋಷವಿದೆಯೆಂದು ನನ್ನ ಬುದ್ಧಿಗೆ ತೋರುವದಿಲ್ಲವಾದರೂ ದೋಷವಿಲ್ಲದವನೆಂಬ ನಿರ್ಣಯವು ಇದರಿಂದಾಗುವದಿಲ್ಲ; ನನ್ನನ್ನು ವಿಚಾರಣೆಮಾಡುವವನು ಕರ್ತನೇ.


ಅವರ ರಕ್ಷಕನು ಬಲಶಾಲಿಯಾಗಿದ್ದಾನೆ; ಅವರಿಗಾಗಿ ನಿನ್ನ ಸಂಗಡ ವ್ಯಾಜ್ಯವಾಡುವನು.


ಯೆಹೋವನೇ ಅವರ ವ್ಯಾಜ್ಯವನ್ನು ನಡಿಸಿ ಸೂರೆಮಾಡಿದವರ ಜೀವವನ್ನು ಸೂರೆ ಮಾಡುವನು.


ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.


ಅನಂತರ ಅಬ್ಷಾಲೋಮನು - ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು ಎಂಬದಾಗಿ ಅಹೀತೋಫೆಲನನ್ನು ಕೇಳಲು ಅವನು -


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿವಸ ಕತ್ತಿಗಿಂತ ಕಾಡೇ ಹೆಚ್ಚಿನ ಸಂಹಾರಕ್ಕೆ ಕಾರಣವಾಯಿತು.


ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಹ ಆರೋಹಣಮಾಡು.


ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಅನ್ಯರು ನನಗೆ ವಿರೋಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. ಸೆಲಾ.


ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು