Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:19 - ಕನ್ನಡ ಸತ್ಯವೇದವು J.V. (BSI)

19 ನೀನು ನಮ್ಮನ್ನು ಪರಾಜಯಪಡಿಸಿ ನಮ್ಮ ದೇಶವನ್ನು ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಕಾರ್ಗತ್ತಲು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೂ ನಮ್ಮನ್ನು ತಂದು ನಾಯಿನರಿಗಳ ಪಾಲಾಗಿಸಿರುವೆ I ಕಾರ್ಗತ್ತಲೆಮ್ಮನು ಸುತ್ತುವರಿಯುವಂತೆ ಮಾಡಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ನರಿಗಳ ವಾಸಸ್ಥಳದಂತೆ ನಮ್ಮ ದೇಶವಿದೆ. ಕಾರ್ಗತ್ತಲಿನ ನೆರಳು ನಮ್ಮನ್ನು ಮುಚ್ಚಿಬಿಟ್ಟಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:19
19 ತಿಳಿವುಗಳ ಹೋಲಿಕೆ  

ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ಕತ್ತಲೆಯೂ ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ; ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ;


ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದ ಪಡುವವು.


ಐದನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಹೊಯ್ಯಲು ಅದರ ರಾಜ್ಯವು ಕತ್ತಲಾಯಿತು. ಜನರು ತಮಗಾದ ಕಷ್ಟದ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು


ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು.


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.


ನಾನು ನರಿಗಳ ತಮ್ಮನೂ ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ.


ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು