Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:3 - ಕನ್ನಡ ಸತ್ಯವೇದವು J.V. (BSI)

3 ಶೂರನೇ ಮಹಿಮಪ್ರಭಾವಗಳನ್ನು ಧರಿಸಿಕೊಂಡು ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ. ನಿಮ್ಮ ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:3
22 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ನನ್ನ ಬಾಯನ್ನು ಹದವಾದ ಖಡ್ಗವನ್ನಾಗಿ ಮಾಡಿ ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ; ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.


ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲಸೌಂದರ್ಯಗಳೂ ಇರುತ್ತವೆ.


ನಿನ್ನ ರಕ್ಷಣಕಾರ್ಯದಿಂದ ಅವನ ಘನತೆಯು ಬಹು ವೃದ್ಧಿಯಾಯಿತು; ಮಹಿಮಪ್ರಭಾವಗಳನ್ನು ಅವನಿಗೆ ಬರಮಾಡಿದ್ದೀ.


ವಿುಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು; ಮತ್ತು ಹಕ್ಕಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆ ತುಂಬಾ ತಿಂದವು.


ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನಂದರೆ - ಪರಲೋಕದೊಳಗೆ ಮಹತ್ವವುಳ್ಳ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಬದುಕಿದರೂ ಸತ್ತರೂ ನಾವು ಕರ್ತನವರೇ. ಯಾಕಂದರೆ ಸತ್ತವರಿಗೂ ಜೀವಿಸುವವರಿಗೂ ಒಡೆಯನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಜೀವಿತನಾದನು.


ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.


ನಾನು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನೂ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.


ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ಕೃಷ್ಟನು; ಪ್ರಭಾವಮಹತ್ವಗಳಿಂದ ಭೂಷಿತನಾಗಿದ್ದೀ.


ಎಲ್ಲಾ ಜನಗಳಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿದ ವಾಕ್ಯವು ನಿಮಗೇ ತಿಳಿದಿರುವದು.


ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಕೆಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ


ಅವನು ಮಾತಾಡುತ್ತಿರುವಾಗಲೇ ಮತ್ತೊಬ್ಬನು ಬಂದು ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ; ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ ಅಂದನು.


ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನ ಕೃಪೆಯ ದೆಸೆಯಿಂದ ಅವನು ಕದಲುವದೇ ಇಲ್ಲ.


ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು.


ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು