Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:4 - ಕನ್ನಡ ಸತ್ಯವೇದವು J.V. (BSI)

4 ಸತ್ಯತೆದೈನ್ಯನೀತಿಗಳನ್ನು ಸ್ಥಾಪಿಸುವದಕ್ಕಾಗಿ ಆಡಂಬರದಿಂದ ವಾಹನಾರೂಢನಾಗಿ ವಿಜಯೋತ್ಸವದೊಡನೆ ಹೊರಡೋಣವಾಗಲಿ. ನಿನ್ನ ಭುಜವೀರ್ಯದಿಂದ ಭಯಂಕರಕೃತ್ಯಗಳು ನಡೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:4
26 ತಿಳಿವುಗಳ ಹೋಲಿಕೆ  

ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ಆಗ ಇಗೋ, ಒಂದು ಬಿಳಿ ಕುದುರೆ ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಬಿಲ್ಲು ಇತ್ತು; ಅವನಿಗೆ ಜಯಮಾಲೆ ಕೊಡಲ್ಪಟ್ಟಿತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.


ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟದ್ದು ಅವರು ಬಿಲ್ಲುಗಾರರಿಗೆ ಹೆದರಿ ಓಡುವದಕ್ಕೋ? ಸೆಲಾ.


ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು.


ಯಾವನ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು