Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:5 - ಕನ್ನಡ ಸತ್ಯವೇದವು J.V. (BSI)

5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:5
26 ತಿಳಿವುಗಳ ಹೋಲಿಕೆ  

ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ಆದರೆ ಕಡೇ ತುತೂರಿಯ ಧ್ವನಿಯಾಗುವಾಗ ನಾವೆಲ್ಲರು ಒಂದು ಕ್ಷಣದಲ್ಲೇ ರೆಪ್ಪೆ ಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.


ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.


ಆವರೆಗೆ ನಿದ್ರಿಸುವವನಂತೆಯೂ ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚತ್ತು


ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಆರ್ಭಟಿಸುತ್ತಾ ತುತೂರಿ ಊದುತ್ತಾ ಯೆಹೋವನ ಮಂಜೂಷವನ್ನು ತಂದರು.


ಯಾಜಕರು ಕೊಂಬುಗಳನ್ನು ಊದಬೇಕು. ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಮಹತ್ತರವಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವದು; ಪ್ರತಿಯೊಬ್ಬನೂ ನೆಟ್ಟಗೆ ಒಳನುಗ್ಗಬಹುದು ಎಂದು ಹೇಳಿದನು.


ಯಾಕೋಬ್ಯರಲ್ಲಿ ಯಾವ ಆಪತ್ತಿನ ಸೂಚನೆಯೂ ಇಲ್ಲ; ಇಸ್ರಾಯೇಲ್ಯರಿಗೆ ವಿಪತ್ತು ಸಂಭವಿಸುವ ಹಾಗೆ ತೋರುವದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡಲೇ ಇದ್ದಾನೆ; ಅವರು ತಮ್ಮ ಅರಸನಿಗೋಸ್ಕರ ಮಾಡುವ ಜಯಘೋಷವು ಕೇಳಿಸುತ್ತಲೇ ಇದೆ.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ತುತೂರಿಗಳನ್ನೂ ಕೊಂಬನ್ನೂ ಊದುತ್ತಾ ಯೆಹೋವರಾಜನಿಗೆ ಜಯಘೋಷಮಾಡಿರಿ.


ಅಮಾವಾಸ್ಯೆಯಲ್ಲಿಯೂ ನಮ್ಮ ಉತ್ಸವದಿನವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಹೇಮಾನ್‍ಯೆದುತೂನರ ಹತ್ತಿರ ವಾದ್ಯಗಾರರಿಗೋಸ್ಕರ ತುತೂರಿ ತಾಳ ಮೊದಲಾದ ದೇವಕೀರ್ತನಾಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳೂ ದ್ವಾರಪಾಲಕರಾಗಿ ನೇವಿುಸಲ್ಪಟ್ಟರು.


ಹೀಗೆ ಎಲ್ಲಾ ಇಸ್ರಾಯೇಲ್ಯರು ಆರ್ಭಟಿಸುತ್ತಾ ಕೊಂಬು ತುತೂರಿಗಳನ್ನು ಗಟ್ಟಿಯಾಗಿ ಊದುತ್ತಾ ತಾಳಹೊಡೆಯುತ್ತಾ ಕಿನ್ನರಿ ಸ್ವರಮಂಡಲಗಳನ್ನು ಬಾರಿಸುತ್ತಾ ಯೆಹೋವನ ನಿಬಂಧನಮಂಜೂಷವನ್ನು ತಂದರು.


ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ, ಎಲೀಯೆಜೆರ್ ಎಂಬ ಯಾಜಕರು ತುತೂರಿಗಳನ್ನು ಊದುತ್ತಾ ದೇವಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್, ಯೆಹೀಯ ಎಂಬವರು ಮಂಜೂಷಾಲಯದ ದ್ವಾರಪಾಲಕರು.


ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.


ಆಹಾ, ನಿಮ್ಮ ಬೀಜವನ್ನು [ಬೆಳೆಯದಂತೆ]ಖಂಡಿಸುವೆನು; ನಿಮ್ಮ ಮುಖದ ಮೇಲೆ ಮಲವನ್ನು, ನಿಮ್ಮ ಹಬ್ಬದ ಪಶುಗಳ ಮಲವನ್ನು ಚೆಲ್ಲಿಬಿಡುವೆನು; ನೀವು ಆ ಮಲದ ತಿಪ್ಪೆಯ ಪಾಲಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು