Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:9 - ಕನ್ನಡ ಸತ್ಯವೇದವು J.V. (BSI)

9 ಜನಾಂಗಗಳಲ್ಲಿ ಶ್ರೇಷ್ಠರಾದವರು ಅಬ್ರಹಾಮನ ದೇವರ ಪ್ರಜೆಯಾಗಿರುವದಕ್ಕೆ ಕೂಡಿಬರುತ್ತಾರೆ; ಯಾಕಂದರೆ ಭೂಪಾಲಕರೆಲ್ಲಾ ದೇವರಿಗೇ ಅಧೀನರಾಗಿದ್ದಾರೆ. ಆತನೇ ಸರ್ವೋನ್ನತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II ಭೂಪಾಲರೆಲ್ಲರೂ ದೇವರಿಗೆ ಅಧೀನರು I ಸರ್ವೋನ್ನತನು, ಸಾರ್ವಭೌಮನು ದೇವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:9
21 ತಿಳಿವುಗಳ ಹೋಲಿಕೆ  

ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನವನೇ; ಅವನು ಇಸ್ರಾಯೇಲ್ಯರ ಸದಮಲಸ್ವಾವಿುಯ ಸ್ವಕೀಯನು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು; ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.


ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಅವನನ್ನು ಸೇವಿಸಲಿ.


ಬಿಡಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿದುಕೊಳ್ಳಿರಿ.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ನಿಮಗೆ ನುಡಿದದ್ದನ್ನು ನೀವು ಓದಲಿಲ್ಲವೇ. ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ ಎಂದು ಹೇಳಿದನು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು