Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:21 - ಕನ್ನಡ ಸತ್ಯವೇದವು J.V. (BSI)

21 ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:21
22 ತಿಳಿವುಗಳ ಹೋಲಿಕೆ  

ನೀನು ಯಾರಿಗೆ ಬೆದರಿ ಹೆದರಿದ್ದರಿಂದ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೆ.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದೀ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. [ಈಗ] ಹೆರುವವಳಂತೆ ಮೂಲುಗುತ್ತಾ ಅಸುರುಸಿರಿನೊಡನೆ ಏದುವೆನು.


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ - ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವದನ್ನೂ ಎಂದಿಗೂ ಮರೆತುಬಿಡೆನು.


ದೇವರು ವಿಚಾರಿಸುವದೆಲ್ಲಿ? ಪರಾತ್ಪರನು ಚಿಂತಿಸುವದುಂಟೋ ಅಂದುಕೊಳ್ಳುತ್ತಾರೆ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ದುಷ್ಟರನ್ನು ಕರುಣಿಸಿದರೂ ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥವಂತರ ದೇಶದಲ್ಲಿಯೂ ಅನ್ಯಾಯವನ್ನಾಚರಿಸುವರು.


ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು.


ನಾನು ನಿಮ್ಮ ಯಜ್ಞಗಳ ವಿಷಯದಲ್ಲಿ ತಪ್ಪೆಣಿಸುವದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.


ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು.


ನನಗೆ ಮುಡಚಟ್ಟಾಗಲಿಲ್ಲ, ಅನ್ಯದೇವತೆಗಳನ್ನು ನಾನು ಹಿಂಬಾಲಿಸಲಿಲ್ಲವೆಂದು ಹೇಗೆ ಹೇಳುತ್ತೀ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ಕೆಲಸವನ್ನು ಮನಸ್ಸಿಗೆ ತಂದುಕೋ, ತನ್ನ ಜಾಡೆಗಳನ್ನು ತಾರುಮಾರು ಮಾಡುವ ವೇಗವಾದ ಹೆಣ್ಣು ಒಂಟೆಯಂತಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು