Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:3 - ಕನ್ನಡ ಸತ್ಯವೇದವು J.V. (BSI)

3 ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:3
28 ತಿಳಿವುಗಳ ಹೋಲಿಕೆ  

ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಮತ್ತು ಯೆಹೋವನ ಬಳಿಯಿಂದ ಬೆಂಕಿ ಹೊರಟು ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ಭಸ್ಮ ಮಾಡಿತು.


ಆತನ ಸನ್ನಿಧಿಯಲ್ಲಿ ಸಮರ್ಪಿಸಲಾಗಿ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.


ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಆತನ ಮುಂದೆ ಮುಂದೆ ವ್ಯಾಧಿಯು ನಡೆಯುತ್ತದೆ; ಆತನ ಹೆಜ್ಜೆಜಾಡುಗಳಲ್ಲಿ ಜ್ವರಜ್ವಾಲೆಯು ಏಳುತ್ತದೆ.


ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.


ದೇವರೇ, ಸುಮ್ಮನಿರಬೇಡ; ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.


ನಮ್ಮ ದೇವರು ನಮ್ಮನ್ನು ವಿಮೋಚಿಸುವದಕ್ಕೋಸ್ಕರ ದೇವರಾಗಿದ್ದಾನೆ; ಕರ್ತನಾದ ಯೆಹೋವನು ಮರಣಕ್ಕೆ ತಪ್ಪಿಸ ಶಕ್ತನಾಗಿದ್ದಾನೆ.


ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ - ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡಿಸುವವನಾಗಿದ್ದಾನೆ ಎಂದು ತಿಳಿಸುವಿರಿ.


ಆದದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶ ಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದು ಬಂದದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು; ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.


ಇಗೋ, ನಾನು ನೋಡಿದೆನು; ಬಡಗಲಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲು ವಿುಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣಕಾಂತಿಯಂಥ ಕಾಂತಿಯು ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು