Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:20 - ಕನ್ನಡ ಸತ್ಯವೇದವು J.V. (BSI)

20 ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರೋಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಜೊತೆಗಾರನು ತನ್ನ ಸ್ನೇಹಿತನ ಮೇಲೆ ದಾಳಿಮಾಡಿದ್ದಾನೆ. ತಾನು ಮಾಡಿದ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:20
20 ತಿಳಿವುಗಳ ಹೋಲಿಕೆ  

ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವದಕ್ಕೆ ಕೈಹಾಕಿ


ನನ್ನ ಒಡಂಬಡಿಕೆಯನ್ನು ಭಂಗಪಡಿಸುವದಿಲ್ಲ; ನನ್ನ ಮಾತನ್ನು ಬದಲಿಸುವದಿಲ್ಲ.


ವಿುತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ;


ಉಪಕಾರಕ್ಕೆ ಅಪಕಾರವನ್ನು ಮಾಡಿದ್ದಾರೆ; ನಾನು ಪ್ರೀತಿಸಿದ್ದಕ್ಕೆ ಪ್ರತಿಯಾಗಿ ನನ್ನನ್ನು ದ್ವೇಷಿಸಿದ್ದಾರೆ.


ಒರಟು ಮೋರೆಯು ಮಾರ್ಪಡುವದು. ದೇವರ ಮೇಲೆ ಇಟ್ಟ ಆಣೆಯ ನಿವಿುತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬದು ನನ್ನ ಬೋಧೆ.


ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ರೇಗಿದವನಾಗಿ ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.


ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವದು.


ಅದಕ್ಕೆ ಆ ಮನುಷ್ಯನು - ನೀನು ನನ್ನ ಕೈಯಲ್ಲಿ ಸಾವಿರ ರೂಪಾಯಿಗಳನ್ನಿಟ್ಟರೂ ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ ಅಬೀಷೈಗೂ ಇತ್ತೈಗೂ - ಜಾಗರೂಕತೆಯಿಂದಿರ್ರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು ಎಂದು ಆಜ್ಞಾಪಿಸಿದನಲ್ಲವೋ?


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.


ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.


ಈಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದನೆಂಬದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು; ಆದರೆ ನಾನು ಅವರಿಗೆ - ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವದಿಲ್ಲ ಎಂದು ಹೇಳಿ ನಿನ್ನನ್ನು ಉಳಿಸಿದೆನು.


ನೀವು ತಿರುಗಿಕೊಂಡು ಯೆಹೋವನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ ಎಂದು ಹೇಳಿ ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯೆಹೋವನ ಯಾಜಕರ ಮೇಲೆ ಕೈಹಾಕುವದಕ್ಕೆ ಮನಸ್ಸುಮಾಡಲಿಲ್ಲ.


ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ; ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಧರ್ಮಶಾಸ್ತ್ರಗಳನ್ನು ಅನುಸರಿಸುವದಿಲ್ಲ.


ನನ್ನ ವಿರೋಧಿಗಳೆಲ್ಲರು ಆಶೆಗೆಟ್ಟು ಕಳವಳಗೊಳ್ಳುವರು; ಅವರು ಫಕ್ಕನೆ ಆಶಾಭಂಗಪಟ್ಟು ಹಿಂದಿರುಗುವರು.


ಪೂರ್ವದಿಂದಲೂ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಅನಾದಿಯಿಂದ ನೀನು ಇದ್ದೀ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು