Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:23 - ಕನ್ನಡ ಸತ್ಯವೇದವು J.V. (BSI)

23 ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:23
19 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ; ದುಷ್ಟರ ವರುಷಗಳಿಗೆ ಕ್ಷಯ.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯಮಾಡುವವರೂ, ಕಪಟಿಗಳೂ ನಿನಗೆ ಹೇಯವಾಗಿದ್ದಾರೆ.


ಅವನ ಕಾಲವು ಕೊನೆಮುಟ್ಟುವದಕ್ಕೆ ಮುಂಚೆಯೇ ಆ ಪ್ರತಿಫಲವು ತಲಪಿಬಿಡುವದು. ಅವನ ಗರಿಯು ಹಸುರಾಗಿರುವದಿಲ್ಲ,


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಹಿಂದೆ ಹಾಕಿಬಿಟ್ಟಿದ್ದೀ.


ಅಧರ್ಮವನ್ನು ಹೆಚ್ಚಾಗಿ ಆಚರಿಸದಿರು; ಬುದ್ಧಿಹೀನನಾಗಿರಬೇಡ; ಏಕೆ ಅಕಾಲ ಮರಣವನ್ನು ಹೊಂದುವಿ?


ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು ಬೀಳಿಸಿ ನಾಶಮಾಡಿಬಿಡುತ್ತೀ.


ಪಾತಾಳಕ್ಕೂ ನಾಶಲೋಕಕ್ಕೂ ಹೇಗೆ ತೃಪ್ತಿಯಿಲ್ಲವೋ ಹಾಗೆ ಮನುಷ್ಯನ ಕಣ್ಣುಗಳಿಗೆ ತೃಪ್ತಿಯಿಲ್ಲ.


ಪಾತಾಳವೂ ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಮತ್ತೂ ಸ್ಪಷ್ಟ.


ಇನ್ನೂ ಬೇಯದಿರುವಾಗಲೇ ಒಲೆಗಿಕ್ಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.


ನನಗೆ ಆಶಾಭಂಗಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಆತನು ನಮ್ಮನ್ನು ಜೀವದಿಂದುಳಿಸಿ ನಮ್ಮ ಕಾಲುಗಳನ್ನು ಜಾರದಂತೆ ಕಾಪಾಡಿದನು.


ಅವನು ಎಂದೂ ಕದಲುವದಿಲ್ಲ; ನೀತಿವಂತನನ್ನು ಯಾವಾಗಲೂ ನೆನಸುವರು.


ಆತನು ನಿನ್ನ ಪಾದಗಳನ್ನು ಕದಲಗೊಡಿಸದಿರಲಿ; ನಿನ್ನನ್ನು ಕಾಯುವವನು ತೂಕಡಿಸದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು