Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:11 - ಕನ್ನಡ ಸತ್ಯವೇದವು J.V. (BSI)

11 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ; ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದರಿಸಿ ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:11
22 ತಿಳಿವುಗಳ ಹೋಲಿಕೆ  

ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿಹೋಗುವದು.


ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.


ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ ದುಷ್ಟರನ್ನು ತಟ್ಟನೆ ಕೆಡವಿಬಿಡು.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಮಂದಿ ಮಾತ್ರ ಉಳಿಯುವಿರಿ.


ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದರಿಸಿ ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.


ಕುರಿಗಳನ್ನೋ ಎಂಬಂತೆ ನಮ್ಮನ್ನು ಘಾತುಕರಿಗೆ ಒಪ್ಪಿಸಿದ್ದೀ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿಬಿಟ್ಟಿದ್ದೀ.


ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.


ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯು ಉಂಟಷ್ಟೆ; ಸತ್ತವರಿಗೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇಲ್ಲ, ಅವರ ಜ್ಞಾಪಕವೇ ಹೋಯಿತಲ್ಲವೆ.


ಅನಂತರದಲ್ಲಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಹಂಗಿಸತೊಡಗಿತು.


ಯೆಹೋವನು ನನಗೆ ಇದ್ದಾನೆ; ಆತನೇ ನನಗೆ ಸಹಾಯಕನು; ನನ್ನ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು