Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:5 - ಕನ್ನಡ ಸತ್ಯವೇದವು J.V. (BSI)

5 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯೆತೋರಿಸಬೇಡ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲರ ದೇವ, ಸೇನಾಧೀಶ್ವರ ಪ್ರಭು, ನೀನು I ದಂಡಿಸು ನೀನೆಚ್ಚರಗೊಂಡು ಅನ್ಯಜನರೆಲ್ಲರನು I ತೋರಬೇಡ ದುರುಳ ದ್ರೋಹಿಗಳಾರಿಗೂ ದಯೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:5
19 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು ಅನ್ನುತ್ತಾರೆ. ಸೆಲಾ.


ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದು ಹೋಗಲಿ. ಅವರ ಮನೆಯಲ್ಲಿಯೂ ಮನಸ್ಸಿನಲ್ಲಿಯೂ ಕೆಟ್ಟತನವೇ.


ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದುಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ದೇವರು ಹೇಳಿದ ಮಾತು ತಪ್ಪಿತೆಂದು ನಾವು ಭಾವಿಸಕೂಡದು. ಯಾಕಂದರೆ ಇಸ್ರಾಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ;


ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೋ; ನಾನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ, ಫಿಲಿಷ್ಟಿಯರನ್ನು ಕಫ್ತೋರಿನಿಂದ, ಅರಾಮ್ಯರನ್ನು ಕೀರಿನಿಂದ [ಏಕ ರೀತಿಯಾಗಿ] ಬರಮಾಡಲಿಲ್ಲವೇ?


ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ; ಅವರ ಅಪರಾಧವನ್ನು ಕ್ಷವಿುಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ಸೇನಾಧೀಶ್ವರನಾದ ಯೆಹೋವದೇವರೇ, ನಿನಗೆ ಮೊರೆಯಿಡುವ ನಿನ್ನ ಪ್ರಜೆಗೆ ಇನ್ನೆಷ್ಟರವರೆಗೆ ಮುನಿದಿರುವಿ?


ಅನ್ಯರು ನನಗೆ ವಿರೋಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. ಸೆಲಾ.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಅಲ್ಲಿ ಯಾಕೋಬನು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಹ ಆರೋಹಣಮಾಡು.


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞಾರೂಪವಾಗಿ ವಿಧಿಸುವದು ಒಳ್ಳೇದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ ನಾಯಕ ದೇಶಾಧಿಪತಿ ಮಂತ್ರಿ ಸಂಸ್ಥಾನಾಧ್ಯಕ್ಷರೂ ಆಲೋಚನೆಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು