Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:2 - ಕನ್ನಡ ಸತ್ಯವೇದವು J.V. (BSI)

2 ನೀನು ದೇಶವನ್ನು ಕಂಪನಗೊಳಿಸಿ ಒಡೆದು ಬಿಟ್ಟಿದ್ದೀ. ಅದರ ಒಡಕುಗಳನ್ನು ಸರಿಮಾಡು; ಅದು ನಡುಗುತ್ತಿರುವದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ I ಅದರೊಡಕನು ಸರಿಮಾಡು ತಡವರಿಸದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿರುವೆ. ನಮ್ಮ ದೇಶವು ಕುಸಿದುಬೀಳುತ್ತಿದೆ; ಅದನ್ನು ಸರಿಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇಶವು ಕಂಪನಗೊಂಡು ಒಡೆದುಹೋಗಿದೆ. ಅದರ ಬಿರುಕುಗಳನ್ನು ಸ್ವಸ್ಥಮಾಡಿರಿ, ಅದು ನಡುಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:2
30 ತಿಳಿವುಗಳ ಹೋಲಿಕೆ  

ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು.


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.


ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ರೋದನವು ತುಂಬಿದೆ; ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದು ಬಿಟ್ಟಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂವಿುಯು ಗಡಗಡನೆ ಕಂಪಿಸಿತು; ಪರ್ವತಗಳ ಬುಡಗಳು ನಡುಗಿ ಕದಲಿದವು.


ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;


ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತವೆ; ಅತಿವೃಷ್ಟಿಯು ಹೊಯ್ದುಕೊಂಡು ಹೋಗುತ್ತದೆ; ಸಾಗರವು ಆರ್ಭಟಿಸಿ ಕೈಗಳನ್ನು ಮೇಲಕ್ಕೆತ್ತುತ್ತದೆ.


ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವದಲ್ಲವೆ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೆ; ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವದು, ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುವದು.


ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.


ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು.


ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.


ಭೂಲೋಕವನ್ನು ಸ್ಥಳದೊಳಗಿಂದ ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.


ಅರಾವಿುಗೆ ಶಿರಸ್ಸು ದಮಸ್ಕ, ದಮಸ್ಕಕ್ಕೆ ಶಿರಸ್ಸು ರೆಚೀನನಷ್ಟೆ; ಎಫ್ರಾಯೀವಿುಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನೇ ತಾನೆ.


ಆತನು ದೃಷ್ಟಿಸಿದ ಮಾತ್ರದಿಂದಲೇ ಭೂವಿುಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.


ಅವನ ದೇಶದ ಮೇರೆಗಳನ್ನು ಕೆಡವಿ ದುರ್ಗಗಳನ್ನು ಹಾಳುಮಾಡಿದ್ದೀ.


ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.


ಯೆರೂಸಲೇಮ್ ಯುವತಿಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಉದಾಹರಣೆಯನ್ನು ಎಲ್ಲಿ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ಆಗ ಆತನಿಗೆ ಸಿಟ್ಟೇರಿದದರಿಂದ ಭೂವಿುಯು ಗಡಗಡನೆ ಕಂಪಿಸಿತು; ಆಕಾಶದ ಆಧಾರಗಳು ನಡುಗಿ ಕದಲಿದವು.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರ ರಾಜಧಾನಿಯನ್ನು ತೆಗೆದುಕೊಂಡು ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ದಾವೀದನು ಯೂಫ್ರೇಟೀಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿ


ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.


ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು