Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:10 - ಕನ್ನಡ ಸತ್ಯವೇದವು J.V. (BSI)

10 ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಸೊಕ್ಕಿರಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:10
26 ತಿಳಿವುಗಳ ಹೋಲಿಕೆ  

ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ ಎಂದು ಹೇಳುವರು.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು; ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ - ಧನವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಎಂದು ಹೇಳಿದನು.


ಆದಕಾರಣ ಇಸ್ರಾಯೇಲ್ಯರ ಸದಮಲಸ್ವಾವಿುಯು ಹೀಗನ್ನುತ್ತಾನೆ - ನೀವು ಈ ಮಾತನ್ನು ಅಸಡ್ಡೆಮಾಡಿ ಬಲಾತ್ಕಾರಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದರಿಂದ


ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಉಬ್ಬಿದ್ದಾರೆ.


ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ ದೇವರು ನೇವಿುಸಿರುವ ಸ್ವಾಸ್ತ್ಯವೂ ಇವೇ.


ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.


[ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ನೀನು ಮಾಡಿದ ಕೇಡಿಗೆ ಭಯಪಡದೆ ನನ್ನನ್ನು ಯಾರೂ ನೋಡರು ಎಂದುಕೊಂಡಿದ್ದೀ; ನಿನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲವೆಂದು ಯೋಚಿಸಿಕೊಂಡಿದ್ದೀ.


ನಿನ್ನ ದೃಷ್ಟಿಯು ಧನದ ಮೇಲೆ ಎರಗುತ್ತದೋ? ಧನವು ಅಷ್ಟರೊಳಗೆ ಮಾಯವಾಗುವದು; ಆಕಾಶದ ಕಡೆಗೆ ಹಾರುವ ಹದ್ದಿನಂತೆ ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ಅವನು ನನ್ನಲ್ಲಿ ಆಸಕ್ತನಾಗಿರುವದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವದರಿಂದ ಅವನನ್ನು ಉದ್ಧರಿಸುವೆನು.


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ನೀವು ನಿಮ್ಮೊಳಗೆ - ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಅಸತ್ಯವನ್ನು ಆಶ್ರಯಿಸಿಕೊಂಡು ಮೋಸವನ್ನು ಮರೆ ಹೊಕ್ಕಿದ್ದೇವಲ್ಲಾ ಅಂದುಕೊಂಡದರಿಂದ


ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.


ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದುದುರುವ ತುಂತುರಿನಂತೆಯೂ ತ್ರಾಸಿನ ತಟ್ಟೆಯ ದೂಳಿನ ಹಾಗೂ ಇರುತ್ತವೆ; ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.


ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು