Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:5 - ಕನ್ನಡ ಸತ್ಯವೇದವು J.V. (BSI)

5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವದು ಆತನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎನ್ನ ಮನಕೆ ಶಾಂತಿ ದೇವನಿಂದಲೆ I ನನಗೆ ನಂಬಿಕೆ ನಿರೀಕ್ಷೆ ಆತನಿಂದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆ ದೇವರಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೌದು, ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ. ನನ್ನ ನಿರೀಕ್ಷೆಯು ದೇವರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:5
21 ತಿಳಿವುಗಳ ಹೋಲಿಕೆ  

ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು,


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಕರ್ತನಾದ ಯೆಹೋವನೇ, ಬಾಲ್ಯಾರಭ್ಯ ನನ್ನ ನಿರೀಕ್ಷೆಯೂ ಭರವಸವೂ ನೀನಲ್ಲವೋ?


ಪಾಪಾತ್ಮರು ಭೂಲೋಕದಲ್ಲಿ ಮುಗಿದು ಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯಾಹುವಿಗೆ ಸ್ತೋತ್ರ.


ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ಕೃಷ್ಟನು; ಪ್ರಭಾವಮಹತ್ವಗಳಿಂದ ಭೂಷಿತನಾಗಿದ್ದೀ.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಯಾಹುವಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು.


ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವದನ್ನು ನೀನು ನೋಡುವಿ.


ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.


ನನಗೆ ಭಯಾಸ್ಪದವಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದೀ.


ಹೀಗಿರಲಾಗಿ ಕರ್ತನೇ, ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.


ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದು ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು