Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 62:9 - ಕನ್ನಡ ಸತ್ಯವೇದವು J.V. (BSI)

9 ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 62:9
25 ತಿಳಿವುಗಳ ಹೋಲಿಕೆ  

ನನ್ನ ಆಯುಸ್ಸನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರೀ ಉಸಿರೇ. ಸೆಲಾ.


ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.


ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದುದುರುವ ತುಂತುರಿನಂತೆಯೂ ತ್ರಾಸಿನ ತಟ್ಟೆಯ ದೂಳಿನ ಹಾಗೂ ಇರುತ್ತವೆ; ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.


ಪ್ರಭುಗಳಲ್ಲಿ ಭರವಸವಿಡುವದಕ್ಕಿಂತ ಯೆಹೋವನನ್ನು ಆಶ್ರಯಿಸುವದು ಒಳ್ಳೇದು.


ನೀನು ನರನನ್ನು ಪಾಪದ ನಿವಿುತ್ತ ಗದರಿಸಿ ಶಿಕ್ಷಿಸುವಾಗ ಅವನ ಚೆಲುವಿಕೆಯು ನುಸಿಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರೀ ಉಸಿರೇ. ಸೆಲಾ.


ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.


ಭರವಸವುಳ್ಳವನಾಗಿಯೇ ಇದ್ದೆನು.


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲ್ಯರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.


ದಾವೀದನು ತಿರಿಗಿ ಯೆಹೋವನನ್ನು - ಕೆಯೀಲದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ ಎಂದು ಕೇಳಿದಾಗ ಆತನು - ಒಪ್ಪಿಸಿಕೊಡುವರು ಎಂದು ಉತ್ತರಕೊಟ್ಟನು.


ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡಿಸುತ್ತಿದ್ದನು. ಸೌಲನು ಇವನನ್ನು ಸೇನಾಪತಿಯನ್ನಾಗಿ ನೇವಿುಸಿದನು; ಇದು ಅವನ ಸೇವಕರಿಗೂ ಎಲ್ಲಾ ಜನರಿಗೂ ಸಮ್ಮತವಾಯಿತು.


ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು.


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ತೆಕೇಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡು ಬಂದಿದ್ದೀ;


ಅವರು ಪರಸ್ಪರವಾಗಿ - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂದು ಹಾಡಿದರು.


ಅದಕ್ಕೆ ಹನ್ನಳು - ಸ್ವಾಮೀ, ಹಾಗಲ್ಲ; ನಾನು ಬಹುದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ಹೊಯ್ದಿದ್ದೇನೆ.


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ -


ಆದದರಿಂದ ಭೂವಿುಯು ಮಾರ್ಪಟ್ಟರೂ ಬೆಟ್ಟಗಳು ಸಮುದ್ರದಲ್ಲಿ ಮುಣುಗಿಹೋದರೂ ನಮಗೇನೂ ಭಯವಿಲ್ಲ.


ಅನೇಕರು ನನ್ನ ದುಃಸ್ಥಿತಿಗೆ ಬೆರಗಾಗುತ್ತಾರೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.


ನನ್ನ ಆತ್ಮವು ಕುಂದಿಹೋಗಿದೆ; ನೀನೇ ನನ್ನ ಮಾರ್ಗವನ್ನು ಬಲ್ಲವನು; ನಾನು ಹೋಗಬೇಕಾದ ದಾರಿಯಲ್ಲಿ ಉರುಲನ್ನೊಡ್ಡಿದ್ದಾರೆ.


ಯೆಹೋವನಲ್ಲಿ ಸದಾ ಭರವಸವಿಡಿರಿ; ಯಾಹುಯೆಹೋವನು ಶಾಶ್ವತವಾಗಿ ಆಶ್ರಯಗಿರಿಯಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು