Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:5 - ಕನ್ನಡ ಸತ್ಯವೇದವು J.V. (BSI)

5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ - ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ. ರಹಸ್ಯವಾಗಿ ಬಲೆಗಳನ್ನು ಒಡ್ಡುವುದಕ್ಕೆ ಮಾತನಾಡುತ್ತಾ, “ನಮ್ಮನ್ನು ಕಾಣುವವರು ಯಾರು?” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:5
17 ತಿಳಿವುಗಳ ಹೋಲಿಕೆ  

ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.


[ಆ ದುಷ್ಟನು] ತನ್ನೊಳಗೆ ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವದೇ ಇಲ್ಲ ಅಂದುಕೊಳ್ಳುತ್ತಾನೆ.


ಆಗ ಆತನು ನನಗೆ - ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟು ತಮ್ಮತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡಿಸುವ ಕೆಲಸವನ್ನು ನೋಡಿದೆಯಾ? ಯೆಹೋವನು ನಮ್ಮನ್ನು ನೋಡನು, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ ಎಂದು ಮಾತಾಡಿಕೊಳ್ಳುತ್ತಾರಷ್ಟೆ ಎಂಬದಾಗಿ ಹೇಳಿದನು.


ಯಾಹು ನೋಡುವದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವದೇ ಇಲ್ಲ ಅನ್ನುತ್ತಾರೆ.


ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಕತ್ತಿಗಳೇ. ನಮ್ಮನ್ನು ಕೇಳುವವರು ಯಾರು ಅಂದುಕೊಳ್ಳುತ್ತಾರೆ.


ನೀನಾದರೋ, - ದೇವರಿಗೆ ಏನು ಗೊತ್ತು, ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?


ಒಬ್ಬರಿಗೊಬ್ಬರು ಸಹಾಯಮಾಡಿದರು, ಒಬ್ಬನಿಗೊಬ್ಬನು ಧೈರ್ಯವಾಗಿರು ಎಂದು ಹೇಳಿದನು.


ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.


ಆದದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು; ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತು. ನಿನ್ನ ಆಶೀರ್ವಾದದಿಂದ ಶುಭವೂ ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬದನ್ನು ನಾನು ಬಲ್ಲೆ ಎಂದು ಹೇಳಿಸಿದನು.


ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು, ಅವರಲ್ಲಿ ನಮ್ಮ ಕೋರಿಕೆಯನ್ನು ತೀರಿಸಿಕೊಳ್ಳುವೆವು, ನಾವು ಕತ್ತಿಯನ್ನು ಹಿರಿದು ಭುಜಬಲದಿಂದ ಅವರನ್ನು ಸಂಹಾರ ಮಾಡುವೆವು ಎಂಬದಾಗಿ ನಮ್ಮ ಶತ್ರುಗಳು ಮಾತಾಡಿಕೊಳ್ಳುತ್ತಿದ್ದರು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬನನ್ನು ನಿಮ್ಮ ಮತದಲ್ಲಿ ಸೇರಿಸಿಕೊಳ್ಳುವದಕ್ಕಾಗಿ ಭೂವಿುಯನ್ನೂ ಸಮುದ್ರವನ್ನೂ ಸುತ್ತಿಕೊಂಡು ಬರುತ್ತೀರಿ; ಅವನು ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟಾಗಿ ನರಕ ಪಾತ್ರನಾಗಮಾಡುತ್ತೀರಿ.


ನಾನು ದೇವಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವದಕ್ಕೆ ಹೊರಟಾಗ ನಾನು ಆಕೆಗೆ - ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ಉಪಕಾರವಾಗಬೇಕು, ಏನಂದರೆ ನೀನು ನನ್ನನ್ನು ಅಣ್ಣನೆಂಬದಾಗಿ ಹೇಳಬೇಕೆಂದು ಬೋಧಿಸಿದೆನು ಅಂದನು.


ಇಸ್ರಾಯೇಲ್ಯರು ತಿರಿಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹ ಕಟ್ಟಿದ ಸ್ಥಳದಲ್ಲೇ ತಿರಿಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು