Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 64:9 - ಕನ್ನಡ ಸತ್ಯವೇದವು J.V. (BSI)

9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 64:9
13 ತಿಳಿವುಗಳ ಹೋಲಿಕೆ  

ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡಿಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವದಕ್ಕೆ ಹೋಗುತ್ತಾರಲ್ಲಾ.


ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.


ನೀತಿವಂತನಿಗೆ ಫಲವುಂಟೆಂತಲೂ ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಯೆರೂಸಲೇವಿುಗೆ ಮಾಡಿದ್ದೆಲ್ಲಾ ಸುಮ್ಮನೆ ಮಾಡಿದ್ದಲ್ಲವೆಂದು ನಿಮಗೆ ತಿಳಿದುಬರುವದು; ಇದು ಕರ್ತನಾದ ಯೆಹೋವನ ನುಡಿ.


ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.


ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.


ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬದು ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ.


ಅವರ ಮೇಲೆ ಕೆಂಡಗಳು ಸುರಿಯಲಿ; ಅವರು ಅಗ್ನಿಕುಂಡದೊಳಕ್ಕೂ ದೊಡ್ಡ ಮಡುವಿನೊಳಕ್ಕೂ ದೊಬ್ಬಲ್ಪಟ್ಟು ತಿರಿಗಿ ಏಳದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು