Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 66:3 - ಕನ್ನಡ ಸತ್ಯವೇದವು J.V. (BSI)

3 ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 66:3
19 ತಿಳಿವುಗಳ ಹೋಲಿಕೆ  

ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು.


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡಿಸಿ ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂವಿುಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.


ಪರಾತ್ಪರನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಅಧಿರಾಜನಾಗಿದ್ದಾನೆ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಮನುಷ್ಯರು ಆತನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ ನೆಲದ ಹಳ್ಳಕೊಳ್ಳಗಳಲ್ಲಿಯೂ ಸೇರಿಕೊಳ್ಳುವರು.


ನಮ್ಮ ನಿರೀಕ್ಷೆಗೆ ಮೀರಿದ ಭಯಂಕರಕೃತ್ಯಗಳನ್ನು ನಡಿಸಿ ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ! ಹೌದು, ನೀನು ಇಳಿದು ಬಂದು ಪರ್ವತಗಳು ನಿನ್ನ ದರ್ಶನದಿಂದ ಅಲುಗಿದರೆ ಎಷ್ಟೋ ಲೇಸು!


ಆತನು ಭೂಪತಿಗಳಿಗೆ ಭಯಪ್ರದನಾಗಿ ಪ್ರಭುಗಳ ಅಹಂಭಾವವನ್ನು ತೊಡೆದುಬಿಡುವನು.


ಆಪಿನೊಳಗೆ ವಾಸಿಸುವ ನೀರಾನೆ, ಕರುಗಳ ಸಹಿತವಾದ ಹೋರಿಗಳ ಗುಂಪು, ಇವುಗಳಂತಿರುವ ಶತ್ರುಜನಾಂಗಗಳನ್ನು ಬೆದರಿಸು. ಅವು ಬೆಳ್ಳೀಗಟ್ಟಿಗಳನ್ನು ತಂದು ನಿನಗೆ ಅಡ್ಡಬೀಳಲಿ. ಯುದ್ಧಾಸಕ್ತ ಜನಾಂಗಗಳನ್ನು ಚದರಿಸಿಬಿಡು.


ವಿುರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು- ಯೆಹೋವನನ್ನು ಗಾನಮಾಡಿರಿ; ಆತನು ಮಹಾಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.


ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ,


ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.


ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವದು, ಭಯಂಕರ ಜನರ ಪಟ್ಟಣವು ನಿನಗೆ ಅಂಜುವದು.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿಕೊಂಡು ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದರಿಸುತ್ತಾನಲ್ಲಾ; ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು