Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:19 - ಕನ್ನಡ ಸತ್ಯವೇದವು J.V. (BSI)

19 ಅವರು ನಿವಿುಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:19
18 ತಿಳಿವುಗಳ ಹೋಲಿಕೆ  

ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನೀನು ತಪ್ಪಿಸಲರಿಯದ ನಾಶನವು ನಿನಗೇ ತಟ್ಟನೆ ಉಂಟಾಗುವದು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ದುಷ್ಟರ ಉತ್ಸಾಹಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಎತ್ತರವಾದ ಗೋಡೆಯ ಒಂದು ಭಾಗವು ಬೊಗ್ಗುತ್ತಾ ತಟ್ಟನೆ ಕ್ಷಣ ಮಾತ್ರದಲ್ಲಿ ಕವಚಿಕೊಳ್ಳುವ ಹಾಗೆ ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವದು.


ಇನ್ನೂ ಬೇಯದಿರುವಾಗಲೇ ಒಲೆಗಿಕ್ಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.


ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಅಂಜಿಸಿ ಹಿಮ್ಮಡಿತುಳಿಯುತ್ತಾ ಬೆನ್ಹತ್ತುವವು.


ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿವಸ ಊಟ ಮಾಡಿರಲಿಲ್ಲವಾದದರಿಂದ ಅವನಲ್ಲಿ ಬಲವೇ ಇರಲಿಲ್ಲ.


ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.


ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು