Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:24 - ಕನ್ನಡ ಸತ್ಯವೇದವು J.V. (BSI)

24 ನಿನ್ನ ಚಿತ್ತವನ್ನು ತಿಳಿಯಪಡಿಸಿ ನನ್ನನ್ನು ನಡಿಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನಗೆ ಉಪದೇಶಿಸುತ್ತಾ ನನ್ನನ್ನು ಮುನ್ನಡೆಸು. ಬಳಿಕ ನಿನ್ನ ಮಹಿಮೆಗೆ ನನ್ನನ್ನು ಸೇರಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:24
25 ತಿಳಿವುಗಳ ಹೋಲಿಕೆ  

[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ - ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡಿಸುವವನಾಗಿದ್ದಾನೆ ಎಂದು ತಿಳಿಸುವಿರಿ.


ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.


ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.


ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡಿಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಭೇದಿಸಿಕೊಂಡು ಬರುವದು, ನಿಮ್ಮ ಕ್ಷೇಮವು ಬೇಗನೆ ವಿಕಸಿಸುವದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿ ಮುಂದರಿಯುವದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವದು.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ ಸ್ವೀಕಾರ ಮಾಡುವನು. ಸೆಲಾ.


ಯೆಹೋವನು ನನಗೆ ಆಲೋಚನೆಯನ್ನು ಹೇಳಿ ಕೊಡುತ್ತಾನೆ; ಆತನನ್ನು ಕೊಂಡಾಡುವೆನು. ರಾತ್ರಿ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.


ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.


ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು ಕರ್ತನ ಹೆಸರನ್ನು ಹೇಳಿ -


ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವದು ಎರಡು ದಿನವಾದರೂ ಒಂದು ತಿಂಗಳಾದರೂ ಒಂದು ವರುಷವಾದರೂ ಸರಿಯೇ, ಆ ಪರ್ಯಂತರವೂ ಇಸ್ರಾಯೇಲ್ಯರು ಪ್ರಯಾಣಮಾಡದೆ ಇಳುಕೊಂಡೇ ಇರುವರು; ಅದು ಎದ್ದಾಗ ಅವರು ಹೊರಡುವರು.


ಸ್ವದೇಶಸ್ಥರೊಂದಿಗೆ ಅವರಿಗೆ ಸ್ವಾಸ್ತ್ಯವು ದೊರೆಯುವದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವಾಸ್ತ್ಯವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು