Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:6 - ಕನ್ನಡ ಸತ್ಯವೇದವು J.V. (BSI)

6 ಆದದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ಕಾರಣ ಗರ್ವವೇ ಅವರಿಗೆ ಕಂಠಮಾಲೆ I ಹಿಂಸಾಚಾರವೇ ಅವರಿಗೆ ಬಟ್ಟೆಬರೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಗರ್ವವು ಅವರಿಗೆ ಆಭರಣವಾಗಿದೆ; ದ್ವೇಷವು ಅವರಿಗೆ ಉಡುಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ಗರ್ವವು ಕಂಠಮಾಲೆಯಂತೆ ಅವರನ್ನು ಸುತ್ತಿದೆ. ದಬ್ಬಾಳಿಕೆ ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:6
25 ತಿಳಿವುಗಳ ಹೋಲಿಕೆ  

ಶಪಿಸುವದೇ ಅವನಿಗೆ ವಸ್ತ್ರವಾಗಿತ್ತು. ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಿತು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಅವು ನಿನ್ನ ತಲೆಗೆ ಅಂದದ ಪುಷ್ಪ ಕಿರೀಟ; ಕೊರಳಿಗೆ ಹಾರ.


ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ವಿುದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,


ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ ಅವರ ಡಂಭ, ಅಹಂಕಾರ, ಸ್ವಾಭಿಮಾನ ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.


ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.


ಜುಮಕಿ, ಬಳೆ, ಮುಸುಕು, ಮುಂಡಾಸ, ಕಾಲಸರಪಣಿ, ನಡುಕಟ್ಟು, ಗಂಧದ ಡಬ್ಬಿ, ತಾಯಿತಿ,


ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿದ್ದೀ, ನಿನ್ನ ಒಂದು ಕಡೆಗಣ್ಣಿನಿಂದ, ನಿನ್ನ ಕಂಠಹಾರದ ಒಂದು ಸರದಿಂದ, ನನ್ನ ಹೃದಯವನ್ನು ವಶಮಾಡಿಕೊಂಡಿದ್ದೀ.


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೆ ನಡೆಯದಿರುವ ಕಾರಣ ಅಪರಾಧಮಾಡಬೇಕೆಂಬ ಯೋಚನೆಯು ನರಜನ್ಮದವರ ಹೃದಯದಲ್ಲಿ ತುಂಬಿ ತುಳುಕುವದು.


ದುಷ್ಟತನವೇ ಅವರ ಅನ್ನ; ಬಲಾತ್ಕಾರವೇ ಅವರ ದ್ರಾಕ್ಷಾರಸಪಾನ.


ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು ತನ್ನ ಒಡ್ಡೋಲಗದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮಾಸನವನ್ನು ಅನುಗ್ರಹಿಸಿದನು.


ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ತನ್ನ ಕೈಯಿಂದ ಮುದ್ರಿಕೆಯನ್ನು ತೆಗೆದು ಯೋಸೇಫನ ಕೈಗೆ ಇಟ್ಟು ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು