Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:19 - ಕನ್ನಡ ಸತ್ಯವೇದವು J.V. (BSI)

19 ಅವರು ಆತನಿಗೆ ವಿರೋಧವಾಗಿ ಅಂದದ್ದೇನಂದರೆ - ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜರೆವ ಮಾತಿನಲಿ ಆಡಿಕೊಂಡರಿಂತು : I “ಅಡವಿಯಲ್ಲಿ ದೇವನೂಟ ಬಡಿಸುವನೆಂತು?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ಆತನಿಗೆ ವಿರೋಧವಾಗಿ ಮಾತಾಡಿ, “ದೇವರು ನಮಗೆ ಅರಣ್ಯದಲ್ಲಿ ಆಹಾರವನ್ನು ಕೊಡಬಲ್ಲನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೌದು, ಅವರು ದೇವರಿಗೆ ವಿರೋಧವಾಗಿ ಮಾತನಾಡಿ, “ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:19
12 ತಿಳಿವುಗಳ ಹೋಲಿಕೆ  

ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲ್ಯರು ಕೂಡ ತಿರಿಗಿ ಅತ್ತುಕೊಂಡು - ಮಾಂಸವು ನಮಗೆ ಹೇಗೆ ಲಭಿಸೀತು;


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.


ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತಾಗ ನಾವೂ ಸತ್ತುಹೋಗಿದ್ದರೆ ಎಷ್ಟೋ ಮೇಲಾಗಿತ್ತು ಎಂದೂ


ಇವರು ನನ್ನ ಬಳಿಗೆ ಅಳುತ್ತಾ ಬಂದು - ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು ಎಂದು ಕೇಳಿಕೊಳ್ಳುತ್ತಾರಲ್ಲಾ; ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು.


ಅವನು ಅಪರಾಧವನ್ನಲ್ಲದೆ ದೇವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು ದೇವರಿಗೆ ವಿರುದ್ಧವಾಗಿ ಅಧಿಕಪ್ರಸಂಗ ಮಾಡುತ್ತಾನೆ ಎಂದು ನನಗೆ ಹೇಳುವರು.


ಅದು ಬಾಯಿತೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ ಆತನ ನಿವಾಸವನ್ನೂ ಪರಲೋಕ ನಿವಾಸಿಗಳನ್ನೂ ದೂಷಿಸಿತು.


ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?


ಯೆರೂಸಲೇವಿುನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನೋ ಎಂಬಂತೆ ಆತನ ವಿಷಯದಲ್ಲಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೂದಾಯ ಭಾಷೆಯಲ್ಲಿ ಮಾತಾಡಿದರು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು