Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:1 - ಕನ್ನಡ ಸತ್ಯವೇದವು J.V. (BSI)

1 ದೇವರೇ, ಮ್ಲೇಚ್ಫರು ನಿನ್ನ ಸ್ವಾಸ್ತ್ಯವನ್ನು ಹೊಕ್ಕು ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳಾಗಿ ಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:1
25 ತಿಳಿವುಗಳ ಹೋಲಿಕೆ  

ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


[ಅವನ ಜನರು] ಯೆರೂಸಲೇವಿುನ ಪೌಳಿಗೋಡೆಗಳನ್ನು ಕೆಡವಿ ಅವರ ಎಲ್ಲಾ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟುಬಿಟ್ಟು ಅಮೂಲ್ಯ ವಸ್ತುಗಳನ್ನು ನಾಶಮಾಡಿದರು.


ವಿರೋಧಿಯು ಕೈಚಾಚಿ ಅವಳ ಭೋಗ್ಯ ವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; ಮ್ಲೇಚ್ಫರು ನಿನ್ನ ಸಭೆಗೆ ಸೇರಬಾರದು ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವದನ್ನು ಆಕೆಯು ಕಾಣಬೇಕಾಯಿತು.


ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಮರೀಕುರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವಾಸ್ತ್ಯವಾಗಿರುವ ಇಸ್ರಾಯೇಲ್ಯರನ್ನು ಸಾಕುವದಕ್ಕೆ ನೇವಿುಸಿದನು.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ ಕನ್ಯೆಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಸ್ಥಾಪಿಸುವಿ. ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಏರ್ಪಡಿಸಿಕೊಂಡಿರುವ ಸ್ಥಾನವಾಗಿಯೂ ಕರ್ತನೇ, ನೀನು ಸಿದ್ಧಪಡಿಸಿಕೊಂಡಿರುವ ಪವಿತ್ರಾಲಯವಾಗಿಯೂ ಇರುವಲ್ಲಿಗೆ ಅವರನ್ನು ಬರಮಾಡುವಿ.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ಆತನು ಅವರಿಗೆ - ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ ದೇವಾಲಯವನ್ನು ಹೊಲೆಗೆಡಿಸಿರಿ ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.


ಮತ್ತು ಕಸ್ದೀಯರು ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಯೆರೂಸಲೇವಿುನ ಸುತ್ತಣ ಗೋಡೆಗಳನ್ನು ಕೆಡವಿದರು.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ದೇವದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಆಜ್ಞಾಪಿಸುತ್ತಾನೆ.


ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ [ನಿನ್ನ ಸ್ವಾಸ್ತ್ಯವನ್ನು] ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ನಿನ್ನ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.


ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಫರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ [ಎಂಬದಾಗಿ ಅಂದುಕೊಳ್ಳುತ್ತೀರೋ?]


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು