Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:3 - ಕನ್ನಡ ಸತ್ಯವೇದವು J.V. (BSI)

3 ಯೆರೂಸಲೇವಿುನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀರಂತೆ ಚೆಲ್ಲಿ ಹರಾ ನೆತ್ತರನು ಜೆರುಸಲೇಮ್ ಸುತ್ತಲು I ನಮ್ಮವರ ಶವಗಳನು ಹೂಳಲು ಯಾರೂ ಇಲ್ಲದಿರಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಕ್ತವು ನೀರಿನಂತೆ ಹರಿಯುವ ತನಕ ಶತ್ರುಗಳು ನಿನ್ನ ಜನರನ್ನು ಕೊಂದುಹಾಕಿದರು. ಶವಗಳನ್ನು ಹೂಳಲು ಯಾರೂ ಉಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ. ಅವರನ್ನು ಹೂಳಿಡುವವನೊಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:3
15 ತಿಳಿವುಗಳ ಹೋಲಿಕೆ  

ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.


ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮಖಡ್ಗಗಳ ದೆಸೆಯಿಂದ ಯೆರೂಸಲೇವಿುನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡರುಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.


ಸಕಲ ಪ್ರಜೆ ಕುಲ ಭಾಷೆ ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು; ಅವುಗಳನ್ನು ಸಮಾಧಿಯಲ್ಲಿ ಇಡಗೊಡಿಸುವದಿಲ್ಲ.


ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.


ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದರು. ಎಂಬದಾಗಿ ಬರೆದಿರುವಂತೆ ಆಗುತ್ತದಲ್ಲಾ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.


ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು.


ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣಿಡರು, ಭೂವಿುಯ ಮೇಲೆ ಗೊಬ್ಬರವಾಗುವರು.


ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು, ಅಂದರೆ ಕಡಿಯುವದಕ್ಕೆ ಖಡ್ಗವನ್ನು, ಸೀಳುವದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವದಕ್ಕೆ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನೇವಿುಸುವೆನು ಎಂಬದು ಯೆಹೋವನಾದ ನನ್ನ ಮಾತು.


ಒಬ್ಬನು ಹೊಲವನ್ನು ಉತ್ತು ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ.


ಮ್ಲೇಚ್ಫರು - ಅವರ ದೇವರು ಎಲ್ಲಿ ಎಂದು ಅನ್ನುವದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು ಜನಾಂಗಗಳಿಗೆ ಗೊತ್ತಾಗಲಿ.


ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು