Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 8:5 - ಕನ್ನಡ ಸತ್ಯವೇದವು J.V. (BSI)

5 ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 8:5
18 ತಿಳಿವುಗಳ ಹೋಲಿಕೆ  

ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ;


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ಆತನು ದೇವದೂತರನ್ನು ಹಿಡಿದವನೆಂದು ಬರೆದಿಲ್ಲ; ಅಬ್ರಹಾಮನ ಸಂತತಿಯನ್ನು ಕೈಹಿಡಿದಿದ್ದಾನಷ್ಟೆ.


ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು.


ನಿನ್ನ ಜೀವವನ್ನು ನಾಶದಿಂದ ತಪ್ಪಿಸುವವನೂ ಪ್ರೀತಿಕೃಪೆಗಳೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ.


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೇ, ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನಿನ್ನ ರಾಜದಂಡವು ನ್ಯಾಯಸ್ಥಾಪಕವಾದದ್ದೇ.


ಒಂದು ದಿವಸ ಅವನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು; ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.


ಮಾನವನು ಎಷ್ಟರವನು, ಅವನನ್ನು ನೀನು ಏಕೆ ಹೆಚ್ಚಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?


ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು