Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:15 - ಕನ್ನಡ ಸತ್ಯವೇದವು J.V. (BSI)

15 ನಿನ್ನ ಬಲಗೈ ನೆಟ್ಟು ಸಾಕಿ ಬೆಳಸಿದ ಸಸಿಯನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು I ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ”ಯನ್ನು ನೋಡು. ನೀನು ಬೆಳೆಸಿದ ಎಳೆ ಸಸಿಯನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ ಪರಾಮರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:15
16 ತಿಳಿವುಗಳ ಹೋಲಿಕೆ  

ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ.


ನಾನೇ ನಿಜವಾದ ದ್ರಾಕ್ಷೇಬಳ್ಳಿ. ನನ್ನ ತಂದೆ ತೋಟಗಾರನು.


ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು;


ಮಹಾಯಾಜಕನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಹಕಾರಿಗಳೂ ಕೇಳಿರಿ; ಇಗೋ, ಮೊಳಿಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬದಕ್ಕೆ ಇವರೇ ಮುಂಗುರುತು.


ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬನ್ನು ತನಗೆ ಸೇರಿಸಿಕೊಳ್ಳಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.


ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವದು; ನನ್ನ ಭುಜವು ಅವನನ್ನು ಬಲಪಡಿಸುವದು.


ನೀನು ನಿನ್ನ ಪರಿಶುದ್ಧವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ ನಿನ್ನ ಜನರಾದ ಇಸ್ರಾಯೇಲ್ಯರನ್ನೂ ಹಾಲೂ ಜೇನೂ ಹರಿಯುವ ದೇಶವೆಂದು ನೀನು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂವಿುಯನ್ನೂ ಆಶೀರ್ವದಿಸು ದೇವರೇ ಎಂದು ಹೇಳಬೇಕು.


ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೂ [ಕೋಪ ಮಾಡುವಿ]? ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.


ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.


ನನ್ನ ನೇತ್ರವು ನಿರಂತರವಾಗಿ ಅಶ್ರುಧಾರೆಯನ್ನು ಸುರಿಸುವದು, ಎಂದಿಗೂ ಬಿಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು