Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:9 - ಕನ್ನಡ ಸತ್ಯವೇದವು J.V. (BSI)

9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ ಅದು ಬೇರು ಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹದಮಾಡಿದೆ ಅದಕೆ ಬೇಕಾದ ನೆಲವನ್ನೆಲ್ಲಾ I ಬೇರೂರಿ ಹಬ್ಬಿಕೊಂಡಿತದು ನಾಡಿನಲ್ಲೆಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. ಆಗ ಅದು ಬೇರೂರಿ ದೇಶವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:9
17 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದಾದದ್ದಲ್ಲ.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವದು, ಇಸ್ರಾಯೇಲು ಹೂಬಿಟ್ಟು ಚಿಗುರುವದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವದು.


ನೀನು ಅವರನ್ನು ನಾಟಿದ್ದೀ, ಅವರು ಬೇರೂರಿ ಬೆಳೆದು ಹಣ್ಣುಬಿಟ್ಟಿದ್ದಾರೆ; ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ತಪ್ಪಿಸಿಕೊಂಡುಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.


ಮತ್ತು ಆತನು ಅವರಿಗೆ ಪರಜನರ ದೇಶಗಳನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರಿಗೆ ಕೈ ಸೇರಿತು.


ಯೋವಾಬನು ದಾವೀದನಿಗೆ ಒಪ್ಪಿಸಿದ ಖಾನೇಷುಮಾರಿಯ ಸಂಖ್ಯೆಯು - ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.


ಸೊಲೊಮೋನನ ಆಳಿಕೆಯಲ್ಲೆಲ್ಲಾ ದಾನ್‍ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮತಮ್ಮ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.


ನಮ್ಮ ಪಿತೃಗಳಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ಅವರ ಭುಜಬಲವೇ ಅವರಿಗೆ ಜಯಕೊಡಲಿಲ್ಲ. ನಿನ್ನ ಭುಜಬಲ, ಹಸ್ತ, ಪ್ರಸನ್ನತೆ ಇವೇ ಅವರಿಗೆ ಜಯವನ್ನುಂಟುಮಾಡಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.


ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.


ಆ ದಿನದಲ್ಲಿ [ಹೀಗೆ ಗಾನ ಮಾಡುವರು] - ಇಗೋ, ವಿಹಾರದ ತೋಟ, ಇದನ್ನು ಕುರಿತು ಹಾಡಿರಿ;


ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು