Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 82:3 - ಕನ್ನಡ ಸತ್ಯವೇದವು J.V. (BSI)

3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ. ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ. ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 82:3
16 ತಿಳಿವುಗಳ ಹೋಲಿಕೆ  

ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತೀ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವದಿಲ್ಲ.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ಆಗ ಅವನಿಗೆ ನೆಮ್ಮದಿಯಾಗಿತ್ತು. ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವದೆಂದರೆ ಇದೇ ಎಂಬದು ಯೆಹೋವನ ನುಡಿ.


ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ.


ಕೊಬ್ಬಿ ಮೆರಮೆರುಗಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪಕ್ಷಹಿಡಿದು ವ್ಯಾಜ್ಯ ನಡಿಸರು, ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸರು.


ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಸದಾಚಾರವನ್ನು ಅಭ್ಯಾಸಮಾಡಿರಿ; ನ್ಯಾಯನಿರತರಾಗಿರಿ, ಹಿಂಸಕನನ್ನು ತಿದ್ದಿ ಸರಿಪಡಿಸಿರಿ, ಅನಾಥನಿಗೆ ನ್ಯಾಯತೀರಿಸಿರಿ, ವಿಧವೆಯ ಪಕ್ಷವಾಗಿ ವಾದಿಸಿರಿ.


ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.


ಅದಲ್ಲದೆ ಬಡವನನ್ನು ಕರುಣಿಸಿ ಪಕ್ಷಪಾತದಿಂದ ತೀರ್ಮಾನ ಮಾಡಬಾರದು.


ನಿಮ್ಮಲ್ಲಿರುವ ಬಡವರು ವ್ಯಾಜ್ಯವಾಡಿದಾಗ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು. ಮೋಸದ ಕಾರ್ಯಕ್ಕೆ ದೂರವಾಗಿರಬೇಕು.


ಏಕಂದರೆ ಅಂಗಲಾಚುವ ಬಡವನನ್ನೂ ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.


ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು ಅನಾಥನ ಮೇಲೆ ಕೈಮಾಡಿದೆನೋ?


ಬಾಯಿ ತೆರೆದು ಧರ್ಮವನ್ನು ನಡಿಸು, ದೀನದರಿದ್ರರಿಗೆ ನ್ಯಾಯವನ್ನು ತೀರಿಸು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ಸೇನಾಧೀಶ್ವರ ಯೆಹೋವನು ಇಂತೆಂದಿದ್ದಾನೆ - ಸರಿಯಾಗಿ ನ್ಯಾಯತೀರಿಸಿರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು