Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದೀ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮ ದೇಶವನ್ನು ನೀವು ದಯೆ ತೋರಿಸಿದ್ದೀರಿ. ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:1
13 ತಿಳಿವುಗಳ ಹೋಲಿಕೆ  

ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವದಿಲ್ಲವೋ?


ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ನಾನು ಕನಿಕರವುಳ್ಳವನಾಗಿ ಯೆರೂಸಲೇವಿುಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು; ಯೆರೂಸಲೇವಿುನಲ್ಲಿ ನೂಲು ಎಳೆಯಲ್ಪಡುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ಇಗೋ, ಆ ದಿನಗಳಲ್ಲಿ, ನಾನು ಯೆಹೂದದ ಮತ್ತು ಯೆರೂಸಲೇವಿುನ ದುರವಸ್ಥೆಯನ್ನು ತಪ್ಪಿಸುವ ಕಾಲದಲ್ಲಿ


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.


ಬೆಳ್ಳಿ ಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬೆಲಿನಿಂದ ಯೆರೂಸಲೇವಿುಗೆ ಕರಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು